Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತೀಯ ಜೀವ ವಿಮಾ ನಿಗಮ | ದೇಶದಲ್ಲಿಯೇ ಅತ್ಯಂತ ವಿಶ್ವಾಸಾರ್ಹ ವಿಮಾ ಸಂಸ್ಥೆ : ಎಸ್. ಹನುಮಂತ ನಾಯಕ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆಪ್ಟೆಂಬರ್. 03 : ನಗರದ ಭಾರತೀಯ ಜೀವ ವಿಮಾ ನಿಗಮ ಶಾಖೆ ವತಿಯಿಂದ ಏರ್ಪಡಿಸಿದ 68ನೇ ವರ್ಷದ ವಿಮಾ ಸಪ್ತಾಹ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಶಾಖಾ ವ್ಯವಸ್ಥಾಪಕ ಎಸ್. ಹನುಮಂತ ನಾಯಕ ನೆರವೇರಿಸಿದರು.

ನಂತರ ಮಾತನಾಡಿ ಭಾರತೀಯ ಜೀವ ವಿಮಾ ಸಂಸ್ಥೆ ದೇಶದಲ್ಲಿಯೇ ಏಕೈಕ ಅತ್ಯುತ್ತಮ ವಿಶ್ವಾಸವುಳ್ಳ  ವಿಮಾ ಸಂಸ್ಥೆಯಾಗಿದೆ, ದೇಶದ ಬಹುತೇಕ ಜನರು ಈ ವಿಮಾ ಸಂಸ್ಥೆಯ ಬಗ್ಗೆ ಅತ್ಯಂತ ವಿಶ್ವಾಸವನ್ನು ಇಟ್ಟುಕೊಂಡಿದ್ದು ವಿಮಾ ಪಾಲಸಿದಾರರಾಗಿದ್ದಾರೆ. ಹಾಗಾಗಿ ನಾವುಗಳೆಲ್ಲಾರು ಸಹಕಾರ ಸಹಬಾಳ್ವೆಯಿಂದ ವಿಮಾ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸೋಣಾ ಎಂದರು.

ನಾನು ಈ ಶಾಖೆಗೆ ಹೊಸದಾಗಿ ಹಿರಿಯ ಶಾಖಾ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡಿದ್ದೇನೆ. ನಿಮ್ಮಗಳ ಸಹಕಾರ ಬಹಳ ಮುಖ್ಯವಾಗಿದೆ ವ್ಯವಸ್ಥಾಪಕ ಮತ್ತು ಸಿಬ್ಬಂದಿ ವರ್ಗ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನಿಮ್ಮಗಳ ಸಹಕಾರದಿಂದ ನನ್ನ ಸೇವಾ ಅವಧಿಯಲ್ಲಿ ನಮ್ಮ ಶಾಖೆ ವಿಭಾಗ ಮಟ್ಟದಲ್ಲಿ  ಅತ್ಯುನ್ನತ ಗುರಿ ಮತ್ತು ಶ್ರೇಣಿ  ತಲುಪುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿ ಎಲ್ಲರಿಗೂ ವಿಮಾ ಸಪ್ತಾಹದ  ಶುಭಾಶಯಗಳನ್ನು ತಿಳಿಸಿದರು.

 

ಈ ಸಂದರ್ಭದಲ್ಲಿ ಸಹಾಯಕ ಶಾಖ ವ್ಯವಸ್ಥಾಪಕ ಲಕ್ಷ್ಮಿಕಾಂತ್, ಹಿರಿಯ ಆಡಳಿತ ಅಧಿಕಾರಿ ಸೀತಾ ಲಕ್ಷ್ಮಿ ಅಭಿವೃದ್ಧಿ ಅಧಿಕಾರಿ ಮಹೇಶ್ ಎ . ಓ. ಶ್ಯಾಮಣ್ಣ ಎ. ಎ.ಓ. ಯತೀಶ್ ಸಾಂಸ್ಕøತಿಕ ಮತ್ತು ಕ್ರೀಡಾ ಕಾರ್ಯದರ್ಶಿ ಚಂದ್ರು ಎಚ್.ಜಿ.ಎ.ಗಳಾದ ರೇಣುಕಾ ಇಂದಿರಾ ಮಮತಾ ನಿರ್ಮಲ ಸುಮಾ  ಗೀತಾ ಗಿರಿವಾಣಿ ಶೇಷಾದ್ರಿ  ಶ್ರೀನಿವಾಸ್ ಮಹಿಳಾ ಪ್ರತಿನಿಧಿ ಕೆ. ಸುಜಾತ ತ್ರಿವೇಣಿವೀಣಾ ದೇವರಾಜ್ ವಿವಿಧ ಶ್ರೇಣಿಯ ವಿಮಾ ಪ್ರತಿನಿಧಿಗಳು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!