Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಣಿಧೂಳ್ ಮಯ ಬದುಕು ಅಯೋಮಯ : ಗಣಿಬಾಧಿತ ಹಳ್ಳಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 15 : ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗಣಿಬಾಧಿತ ಪ್ರದೇಶಕ್ಕೆ ಒಳಪಟ್ಟಿರುವ ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿ, ಗಣಿಬಾಧಿತವಲ್ಲದ ಗ್ರಾಮ ಪಂಚಾಯಿತಿಗಳಿಗೆ ನಿವೇಶನಗಳನ್ನು ಗ್ರಾಮಸಭೆಗಳ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಬೇಕೆಂದು ಜಿಪಂ ಸಿಇಒ ಆದೇಶ ಹೊರಡಿಸಿರುತ್ತಾರೆ. ಮೂಲ ಗಣಿಭಾದಿತ ಹಳ್ಳಿಗಳಿಗೆ ಮಾತ್ರ ನಿವೇಶನ ಹಂಚಿಕೆ ಮಾಡಬೇಕೆಂದು ಕರ್ನಾಟಕ ರಾಜ್ಯ ಗಣಿಭಾದಿತ ಪ್ರದೇಶ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಹೆಚ್. ರಮೇಶ್ ಬಿ ದುರ್ಗ ಇವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸಿಇಒ ಅವರು ಹೊರಡಿಸುವ ಆದೇಶವನ್ನು ಈ ಕೂಡಲೇ ರದ್ದುಗೊಳಿಸಲು ಮನವಿ ಸಲ್ಲಿಸಿದರು.

ವಾಸ್ತವಿಕವಾಗಿ ಗಣಿಭಾದಿತ ಪ್ರದೇಶಕ್ಕೆ ಅತಿ ಹೆಚ್ಚು ಗಣಿ ಚಟುವಟಿಕೆಯಿಂದ ಭಾದಿತವಾಗಿರುವ ಪಂಚಾಯಿತಿಗಳಾದ ಬಿ.ದುರ್ಗ, ಮುತ್ತುಗದೂರು, ಅಂದನೂರು, ಗುಂಟನೂರು, ಸಿರಿಗೆರೆ, ಅಳಗವಾಡಿ, ಹಿರೇಗುಂಟನೂರು, ಭೀಮಸಮುದ್ರ, ದೊಡ್ಡಾಲಘಟ್ಟ, ಸಿದ್ದಾಪುರ, ಈ ಮೇಲ್ಕಂಡ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಗಣಿಯ ಮತ್ತು ಲಾರಿಗಳ ಧೂಳಿನಿಂದ ಸುತ್ತ ಮುತ್ತ ವಾಸಿಸುವ ಜನಗಳ ಆರೋಗ್ಯದ ಮೇಲೆ ಅಪಾರ ದುಷ್ಪರಿಣಾಮ ಭೀರುತ್ತಿವೆ ಎಂದು ಹೆಚ್. ರಮೇಶ್ ದೂರಿದರು.

 

ಉಸಿರಾಟದ ತೊಂದರೆ, ಶ್ವಾಸಕೋಶದ ಕ್ಯಾನ್ಸರ್ ಹಾಗೂ ಕರುಳು ಕ್ಯಾನ್ಸರ್ ಮಾನಸಿಕ ಖಿನ್ನತೆ ಮತ್ತು ಗರ್ಭಿಣಿ ಹೆಣ್ಣು ಮಕ್ಕಳ ಮೇಲೆ ಮತ್ತು ಭ್ರೂಣದಲ್ಲಿಯೇ ಗಣಿ ಧೂಳಿನಿಂದ ಸಾವನ್ನಪ್ಪುತ್ತಿವೆ. ಮತ್ತು ಗಣಿ ಧೂಳಿನಿಂದ ರೈತರಿಗೆ ದುಷ್ಪರಿಣಾವೇನೆಂದರೆ, ರೈತರ ಮುಖ್ಯ ಬೆಳೆಗಳಾದ ಹತ್ತಿ,ಅವರೆ, ಹೆಸರು,ಉದ್ದು, ತೊಗರಿ,ಜೋಳ, ಬಿಳಿಜೋಳ ಮತ್ತು ಎಣ್ಣೆಕಾಳುಗಳ ಬೆಳೆಗಳನ್ನು ಬೆಳೆಯಲು ಸಾಧ್ಯವಾಗದೆ, ಮತ್ತು ತೋಟಗಾರಿಕೆ ಬೆಳೆಗಳಾದ ಹೂವು, ತೆಂಗು, ಅಡಿಕೆ, ಹಲಸು,ಪಪ್ಪಾಯ, ಮಾವು ಇನ್ನುಳಿದ ಬೆಳೆಗಳಿಗೆ ಪರಾಗ ಸ್ಪರ್ಶದಿಂದ ಬೆಳೆಯುತ್ತವೆ. ಗಣಿ ಧೂಳಿನಿಂದ ಆಗುವ ಪರಿಣಾಮ ಜೇನು ಹುಳುಗಳು ಬಂದು ಪರಾಗಸ್ಪರ್ಶ ಮಾಡದೆ ಸಂಪೂರ್ಣವಾಗಿ ಬೆಳೆಗಳ ಇಳುವರಿ ಕಡಿಮೆಯಾಗಿದ್ದು, ರೈತರು ತಂಬಾ ಶೋಚನೀಯ ಪರಿಸ್ಥಿತಿಗೆ ತಲುಪಿದ್ದಾರೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ, ವಕೀಲರಾದ ಮಾಲತೇಶ್ ಅರಸ್ ಹೇಳಿದರು.

 

ಆದ ಕಾರಣ ತಾವುಗಳು ಈ ಕೂಡಲೆ ಉನ್ನತವಾದ ತಂಡವನ್ನು ರಚಿಸಿ ತನಿಖೆ ಮಾಡಬೇಕು. ಮತ್ತು ಆರೋಗ್ಯದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕೆಂದು ಹಾಗೂ ಅಂತರ್ಜಲಮಟ್ಟ ತುಂಬಾ ಆಳಕ್ಕೆ ಹೋಗಿದ್ದು ಅಂದರೆ ಒಂದು ಸಾವಿರದ ಅಡಿಯಿಂದ ಒಂದೂವರೆ ಸಾವಿರ ಅಡಿವರೆಗೂ ಕೊರೆದರೂ ಹಳ್ಳಿಗಳಲ್ಲಿ ಕುಡಿಯಲು ನೀರು ಸಿಗುತ್ತಿಲ್ಲ. ಚಿತ್ರದುರ್ಗ ಗಣಿಭಾದಿತ ಪ್ರದೇಶದಲ್ಲಿ ಅಂತರ್ಜಲ ಸಂಪೂರ್ಣವಾಗಿ ಕುಸಿದಿದೆ. ಇದನ್ನು ಸರಿಪಡಿಸ ಬೇಕೆಂದು ಹೇಳಿದರು.

 

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗಣಿಭಾದಿತ ಪ್ರದೇಶ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಹೆಚ್. ರಮೇಶ್ ಬಿ ದುರ್ಗ, ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ, ವಕೀಲರಾದ ಮಾಲತೇಶ್ ಅರಸ್, ಸಂಚಾಲಕರಾದ ಟಿ.ರುದ್ರಮುನಿ, ಯಶವಂತ್, ಅಜಯ್, ಗಣಿಭಾದಿತ ಪ್ರದೇಶ ಹೋರಾಟ ಸಮಿತಿ ಮುಖಂಡರಾದ ವಿಶ್ವನಾಥನಹಳ್ಳಿ ಎಸ್. ರಂಗಸ್ವಾಮಿ, ಗಂಜಿಗಟ್ಟೆ ರಮೇಶ್ ನಾಯ್ಕ, ವೆಂಕಟೇಶ್ ನಾಯ್ಕ, ಮೋಹನ್, ಸಾಸಲು ಸ್ಟುಡಿಯೋ ಕುಮಾರ್, ಚಂದ್ರೇಗೌಡ, ಮರುಳಸಿದ್ದಪ್ಪ, ಕೆ.ಎನ್ .ಹಳ್ಳಿ ಅಜ್ಜಪ್ಪ, ಕಾಗಳಗೆರೆ ಓಂಕಾರಪ್ಪ, ನಿಂಗರಾಜ್, ಮದಕರಿಪುರ ಟಿ. ಆರ್. ರಂಗನಾಥ್ , ಚಂದ್ರಪ್ಪ ಇತರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment