ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಕರುನಾಡ ವಿಜಯಸೇನೆ ಕಾರ್ಯಕರ್ತರಿಂದ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.30 : ನಾಡಿನ ಹೆಸರಾಂತ ಸಾಹಿತಿಗಳು, ಪ್ರಗತಿಪರರು, ಚಿಂತಕರುಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿರುವುದಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತನೆಂದು ಗುರುತಿಸಿಕೊಂಡಿರುವ ದಾವಣಗೆರೆ ಮೂಲದ ಶಿವಾಜಿ ಜಾಧವ್‍ನನ್ನು ಸಿ.ಸಿ.ಬಿ. ಪೊಲೀಸರು ಬಂಧಿಸಿದ್ದು, ಕೂಲಂಕುಷ ತನಿಖೆ ನಡೆಸಿ ಕಾನೂನು ರೀತಿಯ ಕ್ರಮ ಜರುಗಿಸಬೇಕು. ಸರ್ಕಾರ ಮತ್ತು ನ್ಯಾಯಾಲಯ ಯಾವುದೆ ಕಾರಣಕ್ಕೂ ಜಾಮೀನು ನೀಡಬಾರದೆಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಚಿತ್ರದುರ್ಗದ ಹೆಸರಾಂತ ಸಾಹಿತಿ ಬಿ.ಎಲ್.ವೇಣು, ಕುಂ.ವೀರಭದ್ರಪ್ಪ, ಬಿ.ಟಿ.ಲಲಿತಾನಾಯ್ಕ, ಬಂಜಗೆರೆ ಜಯಪ್ರಕಾಶ್ ಇವರುಗಳಿಗೆ ನಿರಂತರ ಕೊಲೆ ಬೆದರಿಕೆ ಪತ್ರಗಳು ಬರುತ್ತಿದ್ದವು. ಈ ಹಿಂದೆ ಎಂ.ಎಂ.ಕಲ್ಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಇವರುಗಳಿಗೂ ಕೊಲೆ ಬೆದರಿಕೆ ಪತ್ರಗಳನ್ನು ಬರೆದು ಕೊನೆಗೆ ಇಬ್ಬರನ್ನು ಹತ್ಯೆಗೈಯಲಾಯಿತು. ಇಂತಹ ಘಟನೆಗಳು ಇನ್ನು ಮುಂದೆ ಮರುಕಳಿಸಬಾರದೆಂದರೆ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಅವಿನಾಶ್, ಜಗದೀಶ್, ನಾಗರಾಜ್‍ಮುತ್ತು, ಅಖಿಲೇಶ್, ವಿಶ್ವನಾರಾಯಣಮೂರ್ತಿ, ಸಾಯಿಕುಮಾರ್, ಮಣಿಕಂಠ ಇವರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *