ಸ್ವಾತಂತ್ರ್ಯ ಹೋರಾಟಗಾರರಿಗೆ ಜೀವಿತಾವಧಿ ಉಚಿತ ಬಸ್ ಪಾಸ್ ವಿತರಣೆ

1 Min Read

 

ಚಿತ್ರದುರ್ಗ,(ಅಕ್ಟೋಬರ್ 15) : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದ ಅಂಗವಾಗಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಕೊನುಬೇವು ಗ್ರಾಮದ ಭೀಮಯ್ಯ, ತುರುವನೂರಿನ ಸ್ವಾತಂತ್ರ್ಯ ಹೋರಾಟಗಾರರಾದ ದಿವಂಗತ ಬಸವರಾಜಪ್ಪ ಅವರ ಪತ್ನಿ ಶಿವರುದ್ರಮ್ಮ ಅವರಿಗೆ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಜಿ.ಬಿ.ಮಂಜುನಾಥ್ ಅವರು,  ಫಲಾನುಭವಿಗಳ ಮನೆಗೇ ತೆರಳಿ, ಸನ್ಮಾನಿಸಿ ಜೀವಿತಾವಧಿ ಉಚಿತ ಪಾಸ್ ವಿತರಣೆ ಮಾಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನೂತನವಾಗಿ ಪರಿಚಯಿಸಲಾಗಿರುವ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಪತ್ನಿಗೆ ಸಂಸ್ಥೆಯ ಯಾವುದೇ ವರ್ಗದ ಬಸ್ಸಿನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಚಿತ್ರದುರ್ಗ ವಿಭಾಗದ ರಾಜ್ಯ ರಸ್ತೆ ಸಾರಿಗೆ ವಿಭಾದ ವಿಭಾಗೀಯ ನಿಯಂತ್ರಣಾಧಿಕಾರಿ ಮಂಜುನಾಥ್ ತಿಳಿಸಿದರು.  ನಿಗಮದ ಘಟಕ ವ್ಯವಸ್ಥಾಪಕ ಹೊನ್ನಪ್ಪ ಈ ಸಂದರ್ಭದಲ್ಲಿ ಇದ್ದರು

Share This Article
Leave a Comment

Leave a Reply

Your email address will not be published. Required fields are marked *