Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಕು ಪ್ರಪಂಚದಲ್ಲಿ ಮಹತ್ವವಾದ ಬದಲಾವಣೆಯನ್ನು ತಂದಿದೆ : ಡಾ. ಪಾಲಾಕ್ಷಮೂರ್ತಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜುಲೈ.10 :  ಬೆಳಕು ಪ್ರಪಂಚದಲ್ಲಿ ಮಹತ್ವವಾದ ಬದಲಾವಣೆಯನ್ನು ತಂದಿದೆ ಎಂದು ತುಮಕೂರು ವಿ.ವಿ ಯ ಭೌತಶಾಸ್ತ್ರದ ಮುಖ್ಯಸ್ಥರಾದ ಡಾ. ಪಾಲಾಕ್ಷಮೂರ್ತಿ ತಿಳಿಸಿದರು.

ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಭೌತಶಾಸ್ತ್ರ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಮಾರು 272 ವರ್ಷಗಳ ಹಿಂದೆ ಪ್ಯಾರಡೆ ಅವರು ಕಂಡುಹಿಡಿದ ವಿದ್ಯುತ್‌ಶಕ್ತಿಯಿಂದ ಜಗತ್ತಿನಲ್ಲಿ ಮಹತ್ವವಾದ ಬದಲಾವಣೆಯನ್ನು ಹೊಂದಲಾಯಿತು ಮತ್ತು ಮನುಷ್ಯನ ಜೀವನದಲ್ಲಿ ಬೆಳಕು ಅತ್ಯಂತ ಪ್ರಾಮುಖ್ಯತೆಯನ್ನ ವಹಿಸಿದೆ ಎಂದು ಹೇಳಿದರು.

ಥಾಮಸ್ ಅಲ್ವಾ ಎಡಿಸನ್ ಕಂಡುಹಿಡಿದ ಬಲ್ಪು ಸುಮಾರು 200 ವರ್ಷಗಳ ಕಾಲ ತನ್ನ ಕೆಲಸ ಮಾಡುತ್ತದೆ. ಈ ವಿಧಾನದಲ್ಲೇ ಸಿಎಫ್‌ಎಲ್ ಮತ್ತು ಎಲ್.ಇ.ಡಿ ಬಲ್ಪುಗಳು ಈಗ ಕಾರ್ಯನಿರ್ವಹಿಸುತ್ತಿವೆ. ಎಲೆಕ್ಟ್ರೋಮ್ಯಾಗ್ನೆಟಿಕ್ ರೇಡಿಯೆಷನ್ ತಾಯಿ ಗರ್ಭದಲ್ಲಿರುವ ಮಗುವಿಗೂ ಸಹ ರಕ್ಷಕನಾಗಿ ಹಾಗೂ ಪರಿವೀಕ್ಷಕನಾಗಿ ಕೆಲಸ ಮಾಡುವ ಸಾಧನಗಳು ಹಾಗೂ ಎಂ.ಆರ್.ಐ, ಸ್ಕ್ಯಾನಿಂಗ್, ಗಾಮರೇ ಸ್ಕ್ಯಾನಿಂಗ್, ಎಕ್ಸ್ ರೇ ಸೇರಿದಂತೆ ಭೌತಶಾಸ್ತ್ರ ಅಧ್ಯಯನದಿಂದ ಕಂಡುಹಿಡಿದ ಸಾಧನಗಳಾಗಿವೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಭೌತಶಾಸ್ತ್ರ ದಲ್ಲಿ ರ‍್ಯಾಂಕ್ ಪಡೆದ ಮತ್ತು ಭೌತಶಾಸ್ತ್ರ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವೆಂಕಟರೆಡ್ಡಿ, ಪ್ರಾಂಶುಪಾಲರಾದ ಸಿದ್ರಾಮ ಚನಗೊಂಡ ಹಾಗೂ ಅಧ್ಯಾಪಕರುಗಳಾದ ಡಾ. ಶಶಿಧರ್, ಡಾ. ಬೊಮ್ಮಲಿಂಗಯ್ಯ, ಡಾ. ವಿನೋದ್ ಕುಮಾರ್, ಮಿಸ್ ಫಿರ್ ದೋಸ್ ಮುಂತಾದವರ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!