Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳಕು ಪ್ರಪಂಚದಲ್ಲಿ ಮಹತ್ವವಾದ ಬದಲಾವಣೆಯನ್ನು ತಂದಿದೆ : ಡಾ. ಪಾಲಾಕ್ಷಮೂರ್ತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ.10 :  ಬೆಳಕು ಪ್ರಪಂಚದಲ್ಲಿ ಮಹತ್ವವಾದ ಬದಲಾವಣೆಯನ್ನು ತಂದಿದೆ ಎಂದು ತುಮಕೂರು ವಿ.ವಿ ಯ ಭೌತಶಾಸ್ತ್ರದ ಮುಖ್ಯಸ್ಥರಾದ ಡಾ. ಪಾಲಾಕ್ಷಮೂರ್ತಿ ತಿಳಿಸಿದರು.

ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಭೌತಶಾಸ್ತ್ರ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಮಾರು 272 ವರ್ಷಗಳ ಹಿಂದೆ ಪ್ಯಾರಡೆ ಅವರು ಕಂಡುಹಿಡಿದ ವಿದ್ಯುತ್‌ಶಕ್ತಿಯಿಂದ ಜಗತ್ತಿನಲ್ಲಿ ಮಹತ್ವವಾದ ಬದಲಾವಣೆಯನ್ನು ಹೊಂದಲಾಯಿತು ಮತ್ತು ಮನುಷ್ಯನ ಜೀವನದಲ್ಲಿ ಬೆಳಕು ಅತ್ಯಂತ ಪ್ರಾಮುಖ್ಯತೆಯನ್ನ ವಹಿಸಿದೆ ಎಂದು ಹೇಳಿದರು.

ಥಾಮಸ್ ಅಲ್ವಾ ಎಡಿಸನ್ ಕಂಡುಹಿಡಿದ ಬಲ್ಪು ಸುಮಾರು 200 ವರ್ಷಗಳ ಕಾಲ ತನ್ನ ಕೆಲಸ ಮಾಡುತ್ತದೆ. ಈ ವಿಧಾನದಲ್ಲೇ ಸಿಎಫ್‌ಎಲ್ ಮತ್ತು ಎಲ್.ಇ.ಡಿ ಬಲ್ಪುಗಳು ಈಗ ಕಾರ್ಯನಿರ್ವಹಿಸುತ್ತಿವೆ. ಎಲೆಕ್ಟ್ರೋಮ್ಯಾಗ್ನೆಟಿಕ್ ರೇಡಿಯೆಷನ್ ತಾಯಿ ಗರ್ಭದಲ್ಲಿರುವ ಮಗುವಿಗೂ ಸಹ ರಕ್ಷಕನಾಗಿ ಹಾಗೂ ಪರಿವೀಕ್ಷಕನಾಗಿ ಕೆಲಸ ಮಾಡುವ ಸಾಧನಗಳು ಹಾಗೂ ಎಂ.ಆರ್.ಐ, ಸ್ಕ್ಯಾನಿಂಗ್, ಗಾಮರೇ ಸ್ಕ್ಯಾನಿಂಗ್, ಎಕ್ಸ್ ರೇ ಸೇರಿದಂತೆ ಭೌತಶಾಸ್ತ್ರ ಅಧ್ಯಯನದಿಂದ ಕಂಡುಹಿಡಿದ ಸಾಧನಗಳಾಗಿವೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಭೌತಶಾಸ್ತ್ರ ದಲ್ಲಿ ರ‍್ಯಾಂಕ್ ಪಡೆದ ಮತ್ತು ಭೌತಶಾಸ್ತ್ರ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವೆಂಕಟರೆಡ್ಡಿ, ಪ್ರಾಂಶುಪಾಲರಾದ ಸಿದ್ರಾಮ ಚನಗೊಂಡ ಹಾಗೂ ಅಧ್ಯಾಪಕರುಗಳಾದ ಡಾ. ಶಶಿಧರ್, ಡಾ. ಬೊಮ್ಮಲಿಂಗಯ್ಯ, ಡಾ. ವಿನೋದ್ ಕುಮಾರ್, ಮಿಸ್ ಫಿರ್ ದೋಸ್ ಮುಂತಾದವರ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment