Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಿಂಗಾಯತ ಸಿಎಂ ವಿವಾದ : ಬಸವರಾಜ್ ಬೊಮ್ಮಾಯಿ ಭ್ರಷ್ಟ ಎಂದು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

Facebook
Twitter
Telegram
WhatsApp

ಮೈಸೂರು : ಸಿದ್ದರಾಮಯ್ಯ ಅವರು ಇತ್ತೀಚೆಗೆ ವರುಣಾದಲ್ಲಿ ಪ್ರಚಾರದ ವೇಳೆ ಬೊಮ್ಮಾತಿ ವಿರುದ್ಧ ಹರಿಹಾಯ್ದಿದ್ದರು. ರಾಜ್ಯದಲ್ಲಿ ಲಿಂಗಾಯತ ಚೀಫ್ ಮಿನಿಸ್ಟರ್ ಇದ್ದಾರಲ್ಲ. ಅವರೇ ಭ್ರಷ್ಟಾಚಾರ ಮಾಡಿ ಹಾಳು ಮಾಡಿರುವುದು ಎಂದು ಹೇಳಿದ್ದರು. ಈ ಹೇಳಿಕೆ ಬಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಆ ವಿವಾದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ತೆರೆ ಎಳೆದಿದ್ದಾರೆ.

ಇಂದು ಈ ಸಂಬಂಧ ಮಾತನಾಡಿದ ಅವರು, ನಾನು ಹಾಗೇ ಹೇಳಿದ್ದಲ್ಲ. ಬೊಮ್ಮಾಯಿ ಭ್ರಷ್ಟ ಸಿಎಂ ಅಂತ ಹೇಳಿದ್ದು. ಬಸವರಾಜ್ ಬೊಮ್ಮಾಯಿ ಅಂತ ಮಾತ್ರ ಹೇಳಿದ್ದು. ಲಿಂಗಾಯತರು ಅಂತ ನಾನು ಹೇಳಿಲ್ಲ. ಲಿಂಗಾಯತ ಸಮುದಾಯದಲ್ಲಿ ಬಹಳ ಜನ ಹಾನೆಸ್ಟ್ ಸಿಎಂ ಗಳಿದ್ದಾರೆ. ವೀರೇಂದ್ರ ಪಾಟೀಲ್, ನಿಜಲಿಂಗಪ್ಪ ಸೇರಿದಂತೆ ಹಲವರಿದ್ದಾರೆ.

ಇವರೆಲ್ಲಾ ಹಾನೆಸ್ಟ್ ಆಗಿನೇ ಇದ್ದರು. ಆದರೆ ಬಸವರಾಜ್ ಬೊಮ್ಮಾಯಿ ಇದ್ದಾರಲ್ಲ, ಅವರು ಕರೆಪ್ಟ್ ಎಂದಿದ್ದು. ಈ ಚುನಾವಣಾ ಸಮಯದಲ್ಲಿ ಈ ವಿಚಾರವನ್ನು ತಿರುಚಿ‌ಲಾಭ ಪಡೆದುಕೊಳ್ಳುತ್ತಿದ್ದಾರೆ. ನನಗೆ ಲಿಂಗಾಯತರ ಬಗ್ಗೆ ಅಪಾರ ಗೌರವವಿದೆ. ನಮ್ಮ ಪಕ್ಷದಲ್ಲಿ ಅವರಿಗೆ ಯಾಕೆ ಹೆಚ್ಚು ಸೀಟು ಕೊಟ್ಟಿದ್ದು. ಕಳೆದ ಬಾರಿಗಿಂತ ಈ ಬಾರಿ ಇನ್ನು ಹೆಚ್ಚಿನ ಸೀಟು ಕೊಟ್ಟಿದ್ದೀವಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!