Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಿಂಗಾಯತ ಸಿಎಂ ವಿವಾದ : ಬಸವರಾಜ್ ಬೊಮ್ಮಾಯಿ ಭ್ರಷ್ಟ ಎಂದು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

---Advertisement---

ಮೈಸೂರು : ಸಿದ್ದರಾಮಯ್ಯ ಅವರು ಇತ್ತೀಚೆಗೆ ವರುಣಾದಲ್ಲಿ ಪ್ರಚಾರದ ವೇಳೆ ಬೊಮ್ಮಾತಿ ವಿರುದ್ಧ ಹರಿಹಾಯ್ದಿದ್ದರು. ರಾಜ್ಯದಲ್ಲಿ ಲಿಂಗಾಯತ ಚೀಫ್ ಮಿನಿಸ್ಟರ್ ಇದ್ದಾರಲ್ಲ. ಅವರೇ ಭ್ರಷ್ಟಾಚಾರ ಮಾಡಿ ಹಾಳು ಮಾಡಿರುವುದು ಎಂದು ಹೇಳಿದ್ದರು. ಈ ಹೇಳಿಕೆ ಬಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಆ ವಿವಾದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ತೆರೆ ಎಳೆದಿದ್ದಾರೆ.

ಇಂದು ಈ ಸಂಬಂಧ ಮಾತನಾಡಿದ ಅವರು, ನಾನು ಹಾಗೇ ಹೇಳಿದ್ದಲ್ಲ. ಬೊಮ್ಮಾಯಿ ಭ್ರಷ್ಟ ಸಿಎಂ ಅಂತ ಹೇಳಿದ್ದು. ಬಸವರಾಜ್ ಬೊಮ್ಮಾಯಿ ಅಂತ ಮಾತ್ರ ಹೇಳಿದ್ದು. ಲಿಂಗಾಯತರು ಅಂತ ನಾನು ಹೇಳಿಲ್ಲ. ಲಿಂಗಾಯತ ಸಮುದಾಯದಲ್ಲಿ ಬಹಳ ಜನ ಹಾನೆಸ್ಟ್ ಸಿಎಂ ಗಳಿದ್ದಾರೆ. ವೀರೇಂದ್ರ ಪಾಟೀಲ್, ನಿಜಲಿಂಗಪ್ಪ ಸೇರಿದಂತೆ ಹಲವರಿದ್ದಾರೆ.

ಇವರೆಲ್ಲಾ ಹಾನೆಸ್ಟ್ ಆಗಿನೇ ಇದ್ದರು. ಆದರೆ ಬಸವರಾಜ್ ಬೊಮ್ಮಾಯಿ ಇದ್ದಾರಲ್ಲ, ಅವರು ಕರೆಪ್ಟ್ ಎಂದಿದ್ದು. ಈ ಚುನಾವಣಾ ಸಮಯದಲ್ಲಿ ಈ ವಿಚಾರವನ್ನು ತಿರುಚಿ‌ಲಾಭ ಪಡೆದುಕೊಳ್ಳುತ್ತಿದ್ದಾರೆ. ನನಗೆ ಲಿಂಗಾಯತರ ಬಗ್ಗೆ ಅಪಾರ ಗೌರವವಿದೆ. ನಮ್ಮ ಪಕ್ಷದಲ್ಲಿ ಅವರಿಗೆ ಯಾಕೆ ಹೆಚ್ಚು ಸೀಟು ಕೊಟ್ಟಿದ್ದು. ಕಳೆದ ಬಾರಿಗಿಂತ ಈ ಬಾರಿ ಇನ್ನು ಹೆಚ್ಚಿನ ಸೀಟು ಕೊಟ್ಟಿದ್ದೀವಿ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...