ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಜೂ. 25 : ಚಿತ್ರದುರ್ಗ ತಾಲ್ಲೂಕು ಅಖಿಲ ಭಾರತ ಗಾಣಿಗರ ಸಂಘದವತಿಯಿಂದ ಜಿಲ್ಲಾ ಮಟ್ಟದ ಲಿಂಗಾಯತ ಗಾಣಿಗ ಸಮಾಜದದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಪಿ.ಜ್ಞಾನಮೂರ್ತಿ ತಿಳಿಸಿದ್ದಾರೆ.

ಗಾಣಿಗ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ದೃಷ್ಟಿಯಿಂದ ಪ್ರತಿ ವರ್ಷ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ 2025-26ನೇ ಸಾಲಿನಲ್ಲಿ ಎಸ್.ಎಸ್. ಎಲ್.ಸಿ, ಮತ್ತು ದ್ವೀತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಚಿತ್ರದುರ್ಗ ಜಿಲ್ಲೆಯ ಸಮಾಜದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳು ಜೂ,30ರ ಮಂಗಳವಾರ ಸಂಜೆ 5 ಗಂಟೆಯೊಳಗಾಗಿ ಅಂಕಪಟ್ಟಿ, ಆಧಾರ ಕಾರ್ಡ ನಕಲು ಪ್ರತಿಯೊಂದಿಗೆ ಎರಡು ಪಾಸ್ ಪೋರ್ಟ ಸೈಜಿನ ಬಾವಚಿತ್ರದೊಂದಿಗೆ ಅರ್ಜಿಯನ್ನು ಚಿತ್ರದುರ್ಗ ತಾಲ್ಲೂಕು ಗಾಣಿಗ ಸಂಘ, ಶ್ರೀ ಕಲ್ಲೇಶ್ವರಸ್ವಾಮಿ ದಲ್ಲಾಳಿ ಮಂಡಿ, ಎ,ಬ್ಲಾಕ್, ಎ.ಪಿ.ಎಂ.ಸಿ. ಯಾರ್ಡ, ಚಿತ್ರದುರ್ಗ ಇಲ್ಲಿಗೆ ಖುದ್ಧಾಗಿ ಅಥವಾ ಅಂಚೆಯ ಮೂಲಕವಾಗಲಿ ಸಲ್ಲಿಸಲು ಕೊರಲಾಗಿದೆ ಹೆಚ್ಚಿನ ಮಾಹಿತಿಗಾಗಿ9448803174,9481722217,6360951193ಈದೂರವಾಣಿಯನ್ನುಸಂಪರ್ಕ ಮಾಡಬಹುದಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










