Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಲಿಂಗಾಯತ ಪಂಚಮಸಾಲಿ 2 ಎ.ಮೀಸಲಾತಿ : ಜನವರಿ 21 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ : ಎಸ್.ಎಂ.ಎಲ್.ತಿಪ್ಪೇಸ್ವಾಮಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.17): ಲಿಂಗಾಯತ ಪಂಚಮಸಾಲಿಗಳಿಗೆ 2 ಎ.ಮೀಸಲಾತಿ ನೀಡುವುದಾಗಿ ಬರೀ ಆಶ್ವಾಸನೆಯಲ್ಲಿಯೇ ಕಾಲಕಳೆಯುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರ ನಡೆಯನ್ನು ಖಂಡಿಸಿ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪೀಠ ಜಿಲ್ಲಾ ಘಟಕದ ವತಿಯಿಂದ ಜ.21 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಗೌರವಾಧ್ಯಕ್ಷ ಎಸ್.ಎಂ.ಎಲ್.ತಿಪ್ಪೇಸ್ವಾಮಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪಂಚಮಸಾಲಿಗಳಿಗೆ 2 ಎ.ಮೀಸಲಾತಿ ನೀಡುವುದಾಗಿ ಆರು ಬಾರಿ ವಚನ ನೀಡಿರುವ ಮುಖ್ಯಮಂತ್ರಿ ಮಾತು ತಪ್ಪಿರುವುದರಿಂದ ರಾಜ್ಯದ ಪ್ರತಿ ಜಿಲ್ಲೆಯಿಂದ ಒಂದೊಂದು ದಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸಲಾಗುವುದು. ಅದರಂತೆ ಜ.21 ರಂದು ಜಿಲ್ಲೆಯಿಂದ ಇನ್ನೂರು ಮಂದಿ ಧರಣಿಯಲ್ಲಿ ಭಾಗವಹಿಸಲಿದ್ದೇವೆಂದು ಹೇಳಿದರು.

ಲಿಂಗಾಯತ ಪಂಚಮಸಾಲಿ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಸಿ.ಗಂಗಾಧರಪ್ಪ, ಯುವ ಘಟಕದ ಜಿಲ್ಲಾಧ್ಯಕ್ಷ ಹೆಚ್.ಎಂ.ಮಂಜುನಾಥ್, ನವೀನ್‍ಕುಮಾರ್ ಎಸ್.ಟಿ. ಕಾರ್ತಿಕ್, ಗಿರೀಶ್ ಎಂ.ಎಸ್. ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ ಎಸ್. ಮನು ತಮಟಕಲ್ಲು, ವಿಜಯ್‍ಕುಮಾರ್ ಎಲ್.ಎಂ. ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...