ಸದ್ಯ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಆಡಳೊತ ನಡೆಸುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ, ಲಿಂಗಾಯತರ ವಿಚಾರವಾಗಿ ಚರ್ಚೆ ಹುಟ್ಟು ಹಾಕಿದ್ದಾರೆ. ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕಾಂಗ್ರೆಸ್ ಪಕ್ಷದಲ್ಲಿ ಸಿಗುತ್ತಿಲ್ಲ. ಲಿಂಗಾಯತರೆಲ್ಲಾ ಒಂದಾದರೆ ಸರ್ಕಾರವನ್ನೇ ಅಲ್ಲಾಡಿಸಬಹುದು ಎಂದಿದ್ದಾರೆ. ಈ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿ ಕೊಂಚ ಗೊಂದಲವನ್ನುಂಟು ಮಾಡಿದೆ.
ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನಪರ ಕೆಲಸ ಮಾಡುತ್ತಿದೆ. ಕಾವೇರಿ ಹೋರಾಟದ ನಡುವೆ ಈ ವಿಚಾರ ತಂದು ಡೈವರ್ಟ್ ಮಾಡುವುದು ಬೇಡ. ಮಾನ್ಯ ಶಾಮನೂರು ಶಿವಶಂಕರಪ್ಪ ಅವರು ನಮ್ಮ ಸಮುದಾಯದ ಹಿರಿಯರು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು. ಅವರ ಭಾವನೆಗಳನ್ನು ನಾವೂ ಗೌರವಿಸುತ್ತೇವೆ.
ನಮ್ಮ ಸಮುದಾಯದಕ್ಕೆ ಆ ರೀತಿ ಏನಾದರೂ ಆಗಿದ್ದರೆ ನಾವೂ ಕೂತು ಚರ್ಚೆ ಮಾಡುತ್ತೇವೆ. ಸದ್ಯಕ್ಕೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಏಳು ಜನ ಲಿಂಗಾಯತರೆ ಮಂತ್ರಿಗಳಾಗಿದ್ದೀವಿ. ಎಲ್ಲರೂ ಸಮರ್ಥರಿದ್ದೇವೆ. ಹಿರಿಯರು ಹೇಳಿರುವುದನ್ನು ಖಂಡಿತ ವಿಚಾರ ಮಾಡುತ್ತೇವೆ. ಸಂಬಂಧಪಟ್ಟವರ ಬಳಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಅವರು ಪಕ್ಷದ ವಿಚಾರವಾಗಿ ಮಾತನಾಡಿಲ್ಲ. ಸಮುದಾಯದ ಬಗ್ಗೆ ಮಾತನಾಡಿದ್ದಾರೆ. ನನ್ನ ಬಳಿಯೂ ಈ ಹಿಂದೆ ಈ ಬಗ್ಗೆ ಮಾತನಾಡಿದ್ದರು ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.












