Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಿಂಗಾಯತರಿಗೆ ಸೂಕ್ತಸ್ಥಾನಮಾನ ಸಿಗುತ್ತಿಲ್ಲ : ಶಾಮನೂರು ಹೇಳಿಕೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು..?

ಹೆಬ್ಬಾಳ್ಕರ್
---Advertisement---

 

ಸದ್ಯ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಆಡಳೊತ ನಡೆಸುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ, ಲಿಂಗಾಯತರ ವಿಚಾರವಾಗಿ ಚರ್ಚೆ ಹುಟ್ಟು ಹಾಕಿದ್ದಾರೆ. ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕಾಂಗ್ರೆಸ್ ಪಕ್ಷದಲ್ಲಿ ಸಿಗುತ್ತಿಲ್ಲ. ಲಿಂಗಾಯತರೆಲ್ಲಾ ಒಂದಾದರೆ ಸರ್ಕಾರವನ್ನೇ ಅಲ್ಲಾಡಿಸಬಹುದು ಎಂದಿದ್ದಾರೆ. ಈ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿ ಕೊಂಚ ಗೊಂದಲವನ್ನುಂಟು ಮಾಡಿದೆ.

ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನಪರ ಕೆಲಸ ಮಾಡುತ್ತಿದೆ. ಕಾವೇರಿ ಹೋರಾಟದ ನಡುವೆ ಈ ವಿಚಾರ ತಂದು ಡೈವರ್ಟ್ ಮಾಡುವುದು ಬೇಡ. ಮಾನ್ಯ ಶಾಮನೂರು ಶಿವಶಂಕರಪ್ಪ ಅವರು ನಮ್ಮ ಸಮುದಾಯದ ಹಿರಿಯರು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು. ಅವರ ಭಾವನೆಗಳನ್ನು ನಾವೂ ಗೌರವಿಸುತ್ತೇವೆ.

ನಮ್ಮ ಸಮುದಾಯದಕ್ಕೆ ಆ ರೀತಿ ಏನಾದರೂ ಆಗಿದ್ದರೆ ನಾವೂ ಕೂತು ಚರ್ಚೆ ಮಾಡುತ್ತೇವೆ. ಸದ್ಯಕ್ಕೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಏಳು ಜನ ಲಿಂಗಾಯತರೆ ಮಂತ್ರಿಗಳಾಗಿದ್ದೀವಿ. ಎಲ್ಲರೂ ಸಮರ್ಥರಿದ್ದೇವೆ. ಹಿರಿಯರು ಹೇಳಿರುವುದನ್ನು ಖಂಡಿತ ವಿಚಾರ ಮಾಡುತ್ತೇವೆ. ಸಂಬಂಧಪಟ್ಟವರ ಬಳಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಅವರು ಪಕ್ಷದ ವಿಚಾರವಾಗಿ ಮಾತನಾಡಿಲ್ಲ. ಸಮುದಾಯದ ಬಗ್ಗೆ ಮಾತನಾಡಿದ್ದಾರೆ. ನನ್ನ ಬಳಿಯೂ ಈ ಹಿಂದೆ ಈ ಬಗ್ಗೆ ಮಾತನಾಡಿದ್ದರು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...