Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದಲ್ಲಿ ಮದ್ಯದಂಗಡಿ ಮಾಲೀಕರು ಸಂಕಷ್ಟದಲ್ಲಿದ್ದಾರೆ : ಎಂಎಲ್ಸಿ ಕೋಟ ಶ್ರೀನಿವಾಸ ಪೂಜಾರಿ

---Advertisement---

ಉಡುಪಿ: ಬಿಜೆಪಿ ಎಂಎಲ್ಸಿ ಕೋಟ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳಾಗಿದೆ. ಆಡಳಿತಾತ್ಮಕ ಸಮಸ್ಯೆ ಊಹೆಗೂ ನಿಲುಕದಷ್ಟು ಹದಗೆಟ್ಟಿದೆ. ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗಲ್ಲ‌. ಯಾವ ಕಾರಣಕ್ಕೆ ಇಂಥಹ ಅನಾಹುತಗಳನ್ನು ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದಲ್ಲಿ 12,500 ಮದ್ಯದಂಗಡಿ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಸಂಕಷ್ಟ ತೋಡಿಕೊಂಡಿದ್ದಾರೆ. ಅಂಗಡಿಯ ವರ್ಗಾವಣೆಗೆ 18 ಲಕ್ಷ ರೂಪಾಯಿ ಸರ್ಕಾರಕ್ಕೆ ಪಾವತಿಸುವ ನಿಯಮವಿದೆ. ಆದರೆ 25 ಲಕ್ಷ ರೂಪಾಯಿಗೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ. ಹೊಸ ಸನ್ನದಿಗೆ 10 ಲಕ್ಷದ ಬದಲು 75 ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆಯಿಂದಾನೇ 42 ಸಾವಿರ ಕೋಟಿ ಬರುತ್ತಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಭ್ರಷ್ಟಾಚಾರದ ಕೂಪವಾಗಿ ಕಾಡುತ್ತಿದ್ದಾರೆ.

ಲಂಚ ಕೊಡದೆ ಯಾವ ಕೆಲಸವು ಆಗುದಿಲ್ಲ. ಅಧಿಕಾರಿಗಳು ಮಾಹಿತಿ ಹಕ್ಕಿನ ಏಜೆಂಟ್​​ಗಳಾಗಿದ್ದಾರೆ ಎಂದು ಆರೋಪಿಸಿದ್ದಾರೆ. ದಯವಿಟ್ಟು ಈ ಪತ್ರದ ಹಿನ್ನೆಲೆಯಲ್ಲಿ ತನಿಖೆ ಆಗಬೇಕು. ಅಬಕಾರಿ ಇಲಾಖೆ ಅಧಿಕಾರಿಗಳು ಅಬಕಾರಿ ಸಚಿವರ ತನಿಖೆ ಆಗಬೇಕು. ಮುಖ್ಯಮಂತ್ರಿಗಳ ಕೃಪಾಕಟಾಕ್ಷದ ಅಡಿಯಲ್ಲೇ ಇದೆಲ್ಲವೂ ನಡೆಯುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment