Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಮನೆಯಂಗಳದಲ್ಲಿ ಸಾಹಿತ್ಯ ಕಾರ್ಯಕ್ರಮ : ದಯಾಪುತ್ತೂರ್ಕರ್

Facebook
Twitter
Telegram
WhatsApp

ಚಳ್ಳಕೆರೆ, (ಡಿ.19) : ಸಾಹಿತ್ಯ ಚಿಂತನೆಗಳನ್ನು ಜನಮಧ್ಯದಲ್ಲಿ ಬೆಳೆಸುವ ದೃಷ್ಟಿಯಿಂದ ವಿನೂತನವಾಗಿ ಮನೆಯಂಗಳದಲ್ಲಿ ಸಾಹಿತ್ಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುವುದು ಎಂದು ಜಿಲ್ಲಾ ಚಿನ್ಮೂಲಾದ್ರಿ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಆರ್. ದಯಾಪುತ್ತೂರ್ಕರ್ ಹೇಳಿದರು.

ನಗರದ ಶಾಂತಿನಗರದಲ್ಲಿನ ಕವಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ನಿವಾಸದಲ್ಲಿ ಭಾನುವಾರ ನಡೆದ ‘ಮನೆಯಂಗಳದಲ್ಲಿ ಸಾಹಿತ್ಯ’ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಚಿನ್ಮೂಲಾದ್ರಿ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕೊರ್ಲಕುಂಟೆ ಗ್ರಾಮದ ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಜಿಲ್ಲೆಯಲ್ಲಿನ ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಸಲುವಾಗಿ, ಸಾಹಿತ್ಯಾಸಕ್ತರಿರುವ ಮನೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಸಾಹಿತ್ಯ ಪ್ರೋತ್ಸಾಹಗಳ ಕೊರತೆಯಿಂದ ಎಲೆಮರೆಯಂತಿರುವ ಬರಹಗಾರರನ್ನು ಸಮಾಜಕ್ಕೆ ಪರಿಚಯಿಸುವ ಅಗತ್ಯವಿದೆ. ಸಂಪನ್ಮೂಲ ಸಾಹಿತ್ಯ ವ್ಯಕ್ತಿ ಭಾಷಾ ಅಭಿವೃದ್ದಿಯ ಸೇವಕ ಇದ್ದಂತೆ. ಯುವ ಬರಹಗಾರರ ಸಾಹಿತ್ಯ ಸಂಗ್ರಹಿಸಿ ಸಂಕಲನ ಪ್ರಕಟಿಸುವ ಚಿಂತನೆ ಮಾಡಲಾಗಿದೆ ಎಂದು ಹೇಳಿದರು.

ಕವಯಿತ್ರಿ ಶೋಭಾ ಮಲ್ಲಿಕಾರ್ಜುನ ಮಾತನಾಡಿ, ಮನೆಯಂಗಳದಲ್ಲಿ ಸಾಹಿತ್ಯ ಕಾರ್ಯಕ್ರಮ ಸಾಹಿತ್ಯ ವಿಚಾರ ಕಾರಂಜಿಯಂತೆ ಮನೆ ಮತ್ತು ಮನ ತಲುಪುವ ಕೆಲಸವಾಗುತ್ತದೆ. ಇದರಿಂದ ಉದಯೋನ್ಮುಖ ಬರಹಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಲಿದೆ ಎಂದು ಹೇಳಿದರು.

ಉಪನ್ಯಾಸಕಿ ರೇಣುಕಾ ಪ್ರಕಾಶ್ ಮಾತನಾಡಿ, ಜನ ಸಾಮಾನ್ಯರ ಬದುಕಿನ ಪ್ರತಿಬಿಂಬವೇ ಸಾಹಿತ್ಯ ಎನ್ನುವ ವಿಚಾರ ಜನರಿಗೆ ತಿಳಿಸುವ ಕೆಲಸವಾಗಬೇಕು.

ಮನೆಯಂಗಳದಲ್ಲಿ ಸಾಹಿತ್ಯ ಕುರಿತಾಗಿ ಕತೆ, ಕವನ, ಸೃಜನಶೀಲ ಸಾಹಿತ್ಯ ವಿಚಾರಗಳು ಸಮಾಜದ ಜಾಗೃತಿ ಆಗಲಿದೆ ಎಂದು ಹೇಳಿದರು. ಕವಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಮಾತನಾಡಿ, ತಾಲೂಕು ಮಟ್ಟದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಕಾರ್ಯಕ್ರಮ ಮುಗಿದ ಬಳಿಕ ಜಿಲ್ಲಾ ಹಂತದಲ್ಲಿ ಸ್ಪರ್ಧಾ ಕವಿಗೋಷ್ಟಿ ಆಯೋಜನೆ ಮಾಡುವ ಮೂಲಕ ಉದಯೋನ್ಮುಖ ಬರಹಗಾರರಲ್ಲಿ ಇನ್ನಷ್ಟು ಸಾಹಿತ್ಯ ಹವ್ಯಾಸ ಬೆಳೆಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಕವಿಯಿತ್ರಿ ಡಾ.ಚಂದನಿ ಖಾಲಿದ್, ಪುಷ್ಪವಲ್ಲಿ, ಎಂ. ತುಳಸಿ, ಎನ್. ಸಾವಿತ್ರಮ್ಮ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!