Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಸಾಹಿತ್ಯ ಸೇವೆ ಅವಿಸ್ಮರಣೀಯ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Facebook
Twitter
Telegram
WhatsApp

 

ಚಿತ್ರದುರ್ಗ. ಜುಲೈ.02:   ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ. ಫ.ಗು. ಹಳಕಟ್ಟಿಯವರ ಸಾಹಿತ್ಯ ಸೇವೆ ಅವಿಸ್ಮರಣೀಯ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ವಚನ ಸಾಹಿತ್ಯ ಮತ್ತು ವಚನಕಾರರ ಬಗ್ಗೆ ಅಮೂಲಾಗ್ರವಾಗಿ ತಿಳಿಯಲು ಡಾ.ಫ.ಗು.ಹಳಕಟ್ಟಿಯವರು ಹಾಗೂ ಅವರ ತಂಡದ ಮಹಾತ್ಕಾರ್ಯದಿಂದ ಸಾಧ್ಯವಾಗಿದೆ. ವಚನ ಸಾಹಿತ್ಯದ ಮೂಲಪ್ರತಿಗಳಾದ ತಾಳೆಗರಿಗಳನ್ನು, ತಾಮ್ರಶಾಸನಗಳನ್ನು, ವಚನಗಂಟುಗಳನ್ನು ಊರೂರಿಗೆ ತೆರಳಿ, ಮನೆ ಮನೆ ಹುಡುಕಿ, ಸಂಗ್ರಹಿಸಿದ ಡಾ.ಫ.ಗು.ಹಳಕಟ್ಟಿಯವರು ಗ್ರಂಥರೂಪದಲ್ಲಿ ಪ್ರಕಟಿಸಿ, ಮೂರ್ತ ಸ್ವರೂಪ ನೀಡಿ ಸಾಹಿತ್ಯ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.

ಹೊಳಲ್ಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಸಂತೋಷ ಪವಾರ್ ಉಪನ್ಯಾಸ ನೀಡಿ, ನಮ್ಮ ನಾಡಿನ ಭವ್ಯ ಪರಂಪರೆ ಅನುಪಮ ಸಂಸ್ಕøತಿ ಬಗ್ಗೆ ಅಪಾರವಾದ ಅಭಿಮಾನ ಹೊಂದಿದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ತಮ್ಮ ತ್ಯಾಗ, ಪರಿಶ್ರಮದಿಂದ ಹೊಸ ಇತಿಹಾಸ ಬರೆದರು. 12ನೇ ಶತಮಾನದ ನಂತರ ವಚನ ಸಾಹಿತ್ಯಕ್ಕೆ ಪುನರ್ ಚೈತನ್ಯವನ್ನು ತಂದುಕೊಟ್ಟ ಕೀರ್ತಿ ಡಾ. ಹಳಕಟ್ಟಿಯವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಬಸವಾದಿ ಶರಣರ ವಚನಗಳನ್ನು ಬೆಳಕಿಗೆ ತಂದವರು, ಒಂದು ವಿಶ್ವವಿದ್ಯಾಲಯ ಸಾಧಿಸಿದಷ್ಟು ಕೆಲಸವನ್ನು ಏಕಾಂಗಿಯಾಗಿ ಸಾಧಿಸಿದ ಹಳಕಟ್ಟಿಯವರು ಒಂದು ವ್ಯಕ್ತಿಯಾಗಿರದೇ ಒಂದು ಶಕ್ತಿಯಾಗಿ ಕಂಡುಬರುತ್ತಾರೆ ಎಂದು ಅಭಿಪ್ರಾಯಪಟ್ಟರು.

ಗಮನ ಸೆಳೆದ ಕವಿಗೋಷ್ಠಿ: ಡಾ.ಫ.ಗು.ಹಳಕಟ್ಟಿಯವರ ಜನ್ಮ ದಿನಾಚರಣೆ ಅಂಗವಾಗಿ ಡಾ.ಫ.ಗು.ಹಳಕಟ್ಟಿಯವರು ಬದುಕು, ಬರಹ ಹಾಗೂ ವಚನ ಸಾಹಿತ್ಯ ವಿಷಯಕ್ಕೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಕವಿಗೋಷ್ಠಿ ಗಮನ ಸೆಳೆಯಿತು.

ಎಸ್.ಗಂಗಾಧರಪ್ಪ, ಮೀರಾ ನಾಡಿಗ್, ನಿರ್ಮಲ ಮರಡಿಹಳ್ಳಿ, ಎಂ.ಎಸ್.ಸೌಮ್ಯ, ರಾಜೇಶ್ವರಿ ಶ್ರೀಧರ್, ಜಬೀವುಲ್ಲಾ, ದೀಪಿಕಾ ಬಾಬು, ಕೆ.ಪೂರ್ಣಿಮಾ ಶಾಸ್ತ್ರಿ, ಕ್ಯಾಗಿಗುಂಟೆ  ಶಿವಣ್ಣ, ಬಬ್ಬೂರು ತಿಪ್ಪೀರನಾಯಕ, ಡಾ.ಉಮೇಶ್ ಬಾಬು ಮಠದ್, ಸಿ.ಬಿ.ಶೈಲಾ ಜಯಕುಮಾರ್, ಶಬ್ರಿನಾ ಅಹಮದ್, ಬಹಬೂಬಿ, ಕೆ.ಬಿ.ತಿಪ್ಪಮ್ಮ, ಕಾದಂಬರಿ, ಗಿರೀಶಾಚಾರ, ಭುವನೇಶ್ವರಿ, ಲೀಲಾವತಿ ಯುವರಾಜ, ಸಂಕಲ್ಪ ಸೇರಿದಂತೆ ಸುಮಾರು 21ಕ್ಕೂ ಹೆಚ್ಚು ಕವಿಗಳು ಕವನ ವಾಚನ ಮಾಡಿದರು.

ಇದೇ ಸಂದರ್ಭದಲ್ಲಿ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಿದ ಕವಿಗಳಿಗೆ ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್‍ನ ಕಾರ್ಯದರ್ಶಿ ಷಣ್ಮುಖಯ್ಯ, ನೇಕಾರರ ಒಕ್ಕೂಟದ ಅಧ್ಯಕ್ಷ ಗೋವಿಂದಪ್ಪ, ನಿವೃತ್ತ ಮುಖ್ಯ ಶಿಕ್ಷಕ ಹುರುಳಿ ಬಸವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಯ್ಯ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾರ್ವಜನಿಕ ಸೇವಾ ವಾಹನಗಳಲ್ಲಿ ವಿಎಲ್‍ಟಿ ಹಾಗೂ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ : ಏನಿದು ನಿಯಮ…!

  ಚಿತ್ರದುರ್ಗ. ಜುಲೈ04 : ಸಾರ್ವಜನಿಕ ಸೇವೆಯ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಾಣಿಕೆ ವಾಹನಗಳಲ್ಲಿ ವಿಎಲ್‍ಟಿ (ವೆಹಿಕಲ್ ಲೊಕೇಷನ್ ಟ್ರಾಕಿಂಗ್) ಹಾಗೂ ಎಮರ್ಜನ್ಸಿ ಪ್ಯಾನಿಕ್ ಬಟನ್‍ನ್ನು ಅಳವಡಿಸುವುದು ಕಡ್ಡಾಯಗೊಳಿಸಿ ಸಾರಿಗೆ ಆಯುಕ್ತರು

ಮೂಡಾ ಅಕ್ರಮ : ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಏನಂದ್ರು..?

ಬೆಂಗಳೂರು: ಮೂಡಾದಿಂದ ಹದಿನೈದು ಸೈಟುಗಳು ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರ ಹೆಸರಲ್ಲಿ ಇದೆ ಎಂಬುದು ತಿಳಿದ ಮೇಲೆ ಪ್ರತಿಪಕ್ಷಗಳು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ

ಯುವ-ಶ್ರೀದೇವಿ ಅರ್ಜಿ ವಿಚಾರಣೆ : ಡಿವೋರ್ಸ್ ಸಿಕ್ತಾ..? ಏನಾಯ್ತು ಕೇಸ್..?

ಬೆಂಗಳೂರು: ದೊಡ್ಮನೆ ಕುಡಿ ಯುವ ರಾಜ್‍ಕುಮಾರ್ ಹಾಗೂ ಸೊಸೆ ಶ್ರೀದೇವಿ ಭೈರಪ್ಪ ಅವರ ಡಿವೋರ್ಸ್ ಕೇಸ್ ಅರ್ಜಿ ಇಂದು ವಿಚಾರಣೆಗೆ ಬಂದಿದೆ. ಫ್ಯಾಮಿಲಿ ಕೋರ್ಟ್ ಗೆ ಇಂದು ಇಬ್ಬರು ಹಾಜರಾಗಿದ್ದರು. ಅರ್ಜಿ ವಿಚಾರಣೆ ನಡೆಸಿದ

error: Content is protected !!