Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಹಿತ್ಯ, ಸಂಗೀತ ಕಲೆಯ ಎರಡು ಶ್ರೇಷ್ಠ ಮುಖಗಳು: ಡಾ.ದೊಡ್ಡಮಲ್ಲಯ್ಯ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಡಿ.02): ಸಾಹಿತ್ಯ ಸಂಗೀತ ಕಲೆಯ ಎರಡು ಶ್ರೇಷ್ಟ ಮುಖಗಳಾಗಿ ಮಾನವನ ಬದುಕನ್ನು ಸುಂದರಗೊಳಿಸಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯ ಅಭಿಪ್ರಾಯಪಟ್ಟರು.

ಮಾರುತಿ ಸಾಂಸ್ಕೃತಿಕ ಕಲಾ ಸಂಘ ಆಯಿತೋಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ತ.ರಾ.ಸು. ರಂಗಮಂದಿರದಲ್ಲಿ ಶುಕ್ರವಾರ ನಡೆದ ಜಾನಪದ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ಸಂಗೀತ ದೈವೀಕ ಕಲೆ. ಮಾನವನ ಬದುಕಿನಲ್ಲಿ ಸಮಗ್ರತೆ ತಂದುಕೊಡುವ ನಿಟ್ಟಿನಲ್ಲಿ ಕಲೆಯಾಗಿ ಅನನ್ಯ ಸಾಧಿಸಿದೆ. ಶಿಷ್ಠ ಸಂಗೀತಕ್ಕೆ ಜಾನಪದ ಸಂಗೀತ ಮಾತೃ ಸ್ಥಾನ ಹೊಂದಿದೆ. ಜಾನಪದ ಹಾಡುಗಾರ ಆಯಿತೋಳು ವಿರುಪಾಕ್ಷಪ್ಪ ಸಂಗೀತದ ಎಲ್ಲಾ ಪ್ರಕಾರಗಳನ್ನು ಇಲ್ಲಿಯವರೆಗೂ ದಣಿವರಿಯದೆ ಹಾಡಿಕೊಂಡು ಬರುತ್ತಿರುವುದು ಅನುಪಮ ಸೇವೆ ಎಂದು ಗುಣಗಾನ ಮಾಡಿದರು.

ಜಾನಪದ ಸಂಭ್ರಮದ ಅಧ್ಯಕ್ಷತೆ ವಹಿಸಿದ್ದ ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಮಾತನಾಡಿ ಗ್ರಾಮೀಣ ಪ್ರದೇಶಗಳಿಂದ ಹುಟ್ಟಿಕೊಂಡಿರುವ ಜಾನಪದಕ್ಕೆ ಹಿರಿಯರ ಕೊಡುಗೆಯಿದೆ. ಅದನ್ನು ಇಂದಿನ ಯುವಪೀಳಿಗೆ ಉಳಿಸಿಕೊಂಡು ಹೋಗಬೇಕಿದೆ. ನಾಡಗೀತೆ, ರೈತ ಗೀತೆ, ರಾಷ್ಟ್ರಗೀತೆಯ ಸಾಂಸ್ಕøತಿಕ ನಂಟು ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಾಗಬೇಕು. ಹಿರಿಯರ ಅನುಭವದ ಮಾತುಗಳನ್ನು ಕಿವಿಗೊಟ್ಟು ಕೇಳಿಸಿಕೊಂಡು ಅದರಂತೆ ನಡೆಯಿರಿ ಎಂದು ತಿಳಿಸಿದರು.

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಎನ್.ಎಸ್.ಎಸ್.ಅಧಿಕಾರಿ ದೇವೇಂದ್ರನಾಯ್ಕ, ಜಾನಪದ ಹಾಡುಗಾರ ಆಯಿತೋಳು ವಿರುಪಾಕ್ಷಪ್ಪ, ಮೂರ್ತಿ ವೇದಿಕೆಯಲ್ಲಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!