ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವಿಜಯಪುರ: 2023ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ಘೋಷಣೆಯಾಗಲಿದೆ. ಈಗಾಗಲೇ ಪ್ರಜಾಧ್ವನಿ ಯಾತ್ರೆ ಮೂಲಕ ಜನರ ಬಳಿ ತಲುಪಿ, ಸಮಸ್ಯೆಗಳನ್ನು ಆಲಿಸುತ್ತಿರುವ ಸಿದ್ದರಾಮಯ್ಯಗೆ ಪುಟ್ಟ ಬಾಲಕಿಯೊಬ್ಬಳು, ಹಣದ ಸಹಾಯ ಹಸ್ತ ಚಾಚಿದ್ದಾಳೆ.
ವಿಜಯಪುರದಲ್ಲಿ ಸಿದ್ದರಾಮಯ್ಯ ಪ್ರಚಾರದ ಕಾರ್ಯ ನಡೆಸುತ್ತಿದ್ದಾರೆ. ಸಿಂದಗಿ ಪಟ್ಟಣದಲ್ಲಿ ಪ್ರಜಾಧ್ವನಿ ಸಮಾವೇಶ ನಡೆದಿದೆ. ಈ ವೇಳೆ, ವಿದ್ಯಾರ್ಥಿನಿ ಜೀಯಾ ಎಂಬಾಕೆ ತಾನು ಕೂಡಿಟ್ಟಿದ್ದ ಹಣವನ್ನು ಸಿದ್ದರಾಮಯ್ಯ ಅವರಿಗೆ ನೀಡಿದ್ದಾಳೆ. ನೀವೂ ಈ ಬಾರಿ ಚುನಾವಣೆಯಲ್ಲಿ ಗೆಲ್ಲಬೇಕು ಎಂದು ಹೇಳಿದ್ದಾಳೆ.
ಆ ಪುಟ್ಟ ಬಾಲಕಿಯ ಆಸೆ ಕಂಡು ಸಿದ್ದರಾಮಯ್ಯ ಅವರಿಗೆ ಖುಷಿಯಾಗಿದೆ. ಜೀಯಾ ನೀಡಿದ ಹಣವನ್ನು ಮತ್ತೆ ವಾಪಸ್ ಮಾಡಿ, ಇದು ನಿನ್ನ ವಿದ್ಯಾಭ್ಯಾಸಕ್ಕಾಗಿ ಉಪಯೋಗಿಸಿಕೋ ಎಂದು ಹೇಳಿ ವಾಪಸ್ ಮಾಡಿದ್ದಾರೆ. ಈ ಬಗ್ಗೆ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಜೀಯಾ ಮಾತನಾಡಿದ್ದು, ಸಿದ್ದರಾಮಯ್ಯ ಯಾವಾಗಲೂ ಬಡವರ ಪರವಾಗಿ ಇದ್ದಾರೆ. ಅವರು ಬಡವರ ಪರ ಕೆಲಸ ಮಾಡುತ್ತಾರೆ. ಅದಕ್ಕೆ ನಾನು ಕೂಡಿಟ್ಟ ಹಣವ್ನು ಅವರಿಗೆ ನೀಡಲು ಹೋದೆ. ನನಗೆ ಓದುವುದಕ್ಕೆಎ ಇಟ್ಟುಕೋ ಅಂತ ವಾಪಾಸ್ ನೀಡಿದರು ಎಂದಿದ್ದಾಳೆ ಆ ವಿದ್ಯಾರ್ಥಿನಿ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್