Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಉತ್ತರ ಕರ್ನಾಟಕ ಜನರ ಜೀವನಾಡಿ ತುಂಗೆ ಮಲೀನ : ಆತಂಕಗೊಂಡ ಮಂದಿ

---Advertisement---

ಗದಗ: ತುಂಗಾ ನದಿ ಉತ್ತರ ಕರ್ನಾಟಕ ಭಾಗದ ಮೂರು ಜಿಲ್ಲೆಯ ಜನರಿಗೆ ಬಹಳ ಮುಖ್ಯವಾಗಿ ಬೇಕಾದಂತ ನದಿಯಾಗಿದೆ. ಇಲ್ಲಿನ ಜನ ಇದೇ ನದಿಯ ನೀರನ್ನೇ ನಂಬಿಕೊಂಡು ಕೂತಿದ್ದಾರೆ. ಆದರೆ ಈಗ ಈ ನದಿ ನೀರು ಮಲೀನವಾಗಿದೆ. ನೀರಿನ ಬಣ್ಣವೇ ಬದಲಾಗಿದೆ. ನೀರು ಸಂಪೂರ್ಣವಾಗಿ ಹಸಿರು ಬಣ್ಣಕ್ಕೆ ತಿರುಗಿದ್ದು, ಗದಗ ಜಿಲ್ಲೆಯ ಜನರು ಆತಂಕಕ್ಕೀಡಾಗಿದ್ದಾರೆ. ತುಂಗೆಯ ನೀರು ಈಗ ಬರೀ ನೀರಲ್ಲ, ವಿಷಕಾರಿ ನೀರಾಗಿ ಬದಲಾಗಿದೆ.

ಈಗಾಗಲೇ ಈ ನೀರನ್ನ ಕುಡಿದ ಜನರಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕಳೆದ ಒಂದು ವಾರದಿಂದ ನದಿ ನೀರು ಈ ರೀತಿ ಹಸಿರು ಬಣ್ಣಕ್ಕೆ ತಿರುಗಿದೆ. ಜನರೆಲ್ಲ ಆರಂಭದಲ್ಲಿ ಇದು ಪಾಚಿ ಕಟ್ಟಿರಬಹುದು , ಹೀಗಾಗಿ ಹಸಿರು ಬಣ್ಣಕ್ಕೆ ತಿರುಗಿದೆ ಎಂದೇ ಭಾವಿಸಿದ್ದರು. ಆದರೆ ನೀರು ಮತ್ತೆ ಮಾಮೂಲಿ ಬಣ್ಣಕ್ಕೆ ತಿರುಗಲೇ ಇಲ್ಲ. ಆ ನೀರು ಕುಡಿದವರು ಕೂಡ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಇದರಿಂದ ಅಕ್ಕ ಪಕ್ಕದ ಗ್ರಾಮದ ಜನ ಆತಂಕಗೊಂಡಿದ್ದು, ದನ, ಕರುಗಳನ್ನು ಕೂಡ ಬಿಡುತ್ತಿಲ್ಲ.

ಜನ ಕೂಡ ನೀರನ್ನು ಕುಡಿಯಲು ಹೆದರುತ್ತಿದ್ದಾರೆ. ಗದಗ, ಕೊಪ್ಪಳ, ವಿಜಯನಗರ ಜಿಲ್ಲೆಯ ಸುಮಾರು 40 ಕ್ಕೂ ಹೆಚ್ಚು ಅಧಿಕಾರಿ ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತದೆ. ಈ ನೀರು ಕುಡಿದು ಜನರು ಅನಾರೋಗ್ಯದಿಂದ ಬಳಲುತ್ತಿದ್ದಾರೆಂದು ಜನ ಆಕ್ರೋಶ ಹೊರ ಹಾಕಿದ್ದಾರೆ. ಗಂಗಾಪುರ ಬಳಿ ಇರುವ ವಿಜಯನಗರ ಶುಗರ್ ಫ್ಯಾಕ್ಟರಿ ಕೆಮಿಕಲ್ ನೀರನ್ನು ನದಿಗೆ ಬಿಟ್ಟಿರುವ ಕಾರಣ ನದಿಯ ನೀರು ಕಲುಷಿತಗೊಂಡಿದೆ ಎಂದು ಜನ ಆಕ್ರೋಶ ಹೊರ ಹಾಕಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...