Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೋಡಿ ನೋಡಿ ಸಾಕಾದ ಸ್ಥಳೀಯರು ಅಧಿಕಾರಿಗೆ ಪಿಂಡ ಇಟ್ಟರು..!

Facebook
Twitter
Telegram
WhatsApp

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಯ ಸಮಸ್ಯೆ ಬಗೆ ಹರಿಯುತ್ತಿಲ್ಲ. ಅದರಿಂದಾಗಿ ಅದೆಷ್ಟೋ ಪ್ರಾಣಗಳು ಹೋಗಿವೆ. ಗುಂಡಿ ತಪ್ಪಿಸಲು ಹೋಗಿ ಪ್ರಾಣ ಕಳೆದುಕೊಂಡವರಿದ್ದಾರೆ. ಅಷ್ಟೇ ಅಲ್ಲ ಮಳೆ ಬಂದರಂತು ಎಲ್ಲಿವೆ ಗುಂಡಿಗಳು ಎಂಬುದು ಕಾಣದೆ ಅದೆಷ್ಟೋ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ.

ಆದ್ರೆ ಅಧಿಕಾರಿಗಳು ಮಾತ್ರ ರಸ್ತೆ ಗುಂಡಿ ಮುಚ್ಚುವುದರಲ್ಲಿ ವಿಫಲರಾಗಿದ್ದಾರೆ. ಕ್ಯಾರೆ ಎನ್ನದೆ ಇರುವ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದ ಸ್ಥಳೀಯರು, ಇದೀಗ ಅಧಿಕಾರಿಗಳಿಗೆ ಪಿಂಡ ಇಟ್ಟಿದ್ದಾರೆ. ಯಲಹಂಕ ವ್ಯಾಪ್ತಿಯ ಕೆ.ಆರ್ ಪುರಂ ಮತ್ತು ಬೆಟ್ಟಗಳ್ಳಿ ರಸ್ತೆಯ ಗುಂಡಿಯೊಂದರಲ್ಲಿ ಬಿಬಿಎಂಪಿ ಚೀಫ್ ಕಮಿಷನರ್ ಗೌರವ್ ಗುಪ್ತಾ ಹಾಗೂ ಚೀಫ್ ಎಂಜಿನಿಯರ್ ಹೆಸರಿನಲ್ಲಿ ಪಿಂಡ ಪ್ರದಾನ ಮಾಡಿದ್ದಾರೆ.

ಗುಂಡಿ ಮುಚ್ಚದ ಅಧಿಕಾರಿಗಳಿಗೆ ಪಿಂಡ ಇಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಅಭಿವೃದ್ಧಿ ಹೆಸರಲ್ಲಿ ಸಾವಿರಾರು ಕೋಟಿ ಖರ್ಚು ಮಾಡಿರುವುದಾಗಿ ಬಿಬಿಎಂಪಿ ಬಾಯಿ ಬಡಿದುಕೊಳ್ಳುತ್ತಿದೆ. ಆದರೆ ಯಲಹಂಕ ವ್ಯಾಪ್ತಿಯ ಒಂದೇ ಒಂದು ರಸ್ತೆಯೂ ಸರಿಯಿಲ್ಲ. ರಸ್ತೆ ಗುಂಡಿಗಳಿಂದ ಪ್ರತಿನಿತ್ಯ ಹತ್ತಾರು ಸವಾರರು ಬಿದ್ದು ಸಾವು ನೋವಿಗೀಡಾಗುತ್ತಿದ್ದಾರೆ. ಈ ಬಗ್ಗೆ ಹಲವು ಮಾರಿ ಮನವಿ ಮಾಡಿದ್ದರು ಪ್ರಯೋಜನವಾಗಿಲ್ಲ. ಹಾಗಾಗಿ ಇವತ್ತು ಅಧಿಕಾರಿಗಳಿಗೆ ಪಿಂಡ ಪ್ರದಾನ ಮಾಡುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!