Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಲಾಕ್ ಡೌನ್ : ಶಾಲಾ ಕಾಲೇಜು,ಸಿನಿಮಾ ಹಾಲ್‌ ಬಂದ್ !

Facebook
Twitter
Telegram
WhatsApp

ನವದೆಹಲಿ : ನಗರದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಮೊದಲ ಹಂತವಾಗಿ yellow alert ಘೋಷಿಸಲಾಗಿದೆ.

ವಿಪತ್ತು ನಿರ್ವಹಣಾ ಪ್ರಾಧಿಕಾರವು ಘೋಷಿಸಿದ ಹೊಸ ಮಾರ್ಗಸೂಚಿಗಳನ್ನು ಮೀರಿ ಧನಾತ್ಮಕ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ (ಜೂನ್ 9 ರಿಂದ) ಕೇವಲ ಒಂದು ದಿನದಲ್ಲಿ 331 ಪ್ರಕರಣಗಳು ಏರಿಕೆಯಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಸತತ ಎರಡು ದಿನಗಳವರೆಗೆ ಪಾಸಿಟಿವಿಟಿ ದರವು 0.5% ಕ್ಕಿಂತ ಹೆಚ್ಚಿದ್ದರೆ ಅಥವಾ ಸತತ ಏಳು ದಿನಗಳಲ್ಲಿ ಧನಾತ್ಮಕ ಪ್ರಕರಣಗಳ ಸಂಖ್ಯೆ 1,500 ಮೀರಿದರೆ yellow alert   ವಿಧಿಸಬಹುದು ಎಂದು ಅದು ಹೇಳಿದೆ.

ಇತ್ತೀಚಿನ ಮಾರ್ಗಸೂಚಿಗಳ ಪ್ರಕಾರ ,

  • ಎಲ್ಲಾ ಶಿಕ್ಷಣ ಸಂಸ್ಥೆಗಳು, ಸಿನಿಮಾ ಹಾಲ್‌ಗಳು ಮತ್ತು ಜಿಮ್‌ಗಳನ್ನು ಮುಚ್ಚಲಾಗುವುದು.
  • ನಗರದಲ್ಲಿ ರಾತ್ರಿ 11ರಿಂದ ಬೆಳಗ್ಗೆ 5 ರವರೆಗೆ ಕರ್ಫ್ಯೂ.
  • 50 ರಷ್ಟು ಸಾಮರ್ಥ್ಯದಲ್ಲಿ ಖಾಸಗಿ ಕಚೇರಿಗಳು ಕಾರ್ಯನಿರ್ವಹಿಸುತ್ತವೆ.
  •  ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರಿಗೆ ಮಾತ್ರ ಅವಕಾಶ.
  • 50 ರಷ್ಟು ಸಾಮರ್ಥ್ಯದೊಂದಿಗೆ ಬಾರ್‌ಗಳು, ಸ್ಪಾಗಳು ಕಾರ್ಯನಿರ್ವಹಿಸಲಿವೆ.
  • 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ರೆಸ್ಟೋರೆಂಟ್‌ಗಳಿಗೆ ಅನುಮತಿ.
  • ಹೋಟೆಲ್‌ಗಳು ಕ್ವಾರಂಟೈನ್ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತವೆ.
  • ಮದುವೆ ಮತ್ತು ಅಂತ್ಯಕ್ರಿಯೆಗಳಲ್ಲಿ 20 ಜನರಿಗೆ ಮಾತ್ರ ಅವಕಾಶವಿದೆ.
  • ಅಗತ್ಯವಲ್ಲದ ಸೇವೆಗಳು ಅಥವಾ ಸರಕುಗಳನ್ನು ಹೊಂದಿರುವ ಅಂಗಡಿಗಳು/ಮಾಲ್‌ಗಳು ಬೆಸ-ಸಮ ನಿಯಮದ ಅಡಿಯಲ್ಲಿ ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ತೆರೆದಿರುತ್ತವೆ.
  • ದೆಹಲಿ ಮೆಟ್ರೋ 50% ಆಸನ ಸಾಮರ್ಥ್ಯದೊಂದಿಗೆ ಚಲಿಸುತ್ತದೆ, ಆದರೆ ನಿಂತಿರುವ ಪ್ರಯಾಣಿಕರಿಗೆ ಅವಕಾಶವಿಲ್ಲ.
  •  ಧಾರ್ಮಿಕ ಸ್ಥಳಗಳು ತೆರೆದಿರುತ್ತವೆ ಆದರೆ ಭಕ್ತರಿಗೆ ಪ್ರವೇಶವಿಲ್ಲ.
  • ಮುಂದಿನ ಮಾರ್ಗಸೂಚಿಗಳನ್ನು ಹೊರಡಿಸುವವರೆಗೆ ದೆಹಲಿ ಸರ್ಕಾರವು ಎಲ್ಲಾ ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕ ಸಭೆಗಳನ್ನು ನಿಷೇಧಿಸಿದೆ.
Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

error: Content is protected !!