Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕಸಭಾ ಚುನಾವಣೆ : ಏ‌2ಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ನಿರ್ಧಾರ

---Advertisement---

ಹುಬ್ಬಳ್ಳಿ: ಧಾರಾವಾಡ ಕ್ಷೇತ್ರದಿಂದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಎಂಬ ಒತ್ತಾಯ ಕೇಳಿ ಬರುತ್ತಿದೆ. ಉತ್ತರ ಪ್ರದೇಶದ ಮಾದರಿಯಂತೆ ಧಾರವಾಡದಲ್ಲಿ ಶಿರಹಟ್ಟಿ ಮಠದ ಪಕೀರ ದಿಂಗಾಲೇಶ್ವರ ಸ್ವಾಮೀಜಿಯನ್ನು ಕಣಕ್ಕಿಳಿಸುವಂತೆ ಮನವಿ ಕೂಡ ಮಾಡಲಾಗಿದೆ. ಈ ಸಂಬಂ್ದ ಇಂದು 80ಕ್ಕೂ ಹೆಚ್ಚು ಮಾಠಾಧೀಶರ ಸಮ್ಮುಖದಲ್ಲು ಮಹತ್ವದ ಸಭೆಯನ್ನು ಮೂರು ಸಾವುರ ಮಠದಲ್ಲಿ ನಡೆಸಲಾಗಿದೆ.

ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ. ಅದರಲ್ಲಿಧಾರವಾಡ ಲಿಂಗಾಯತ ಮತ ವಿಭಜನೆ, ಧಾರ್ಮಿಕವಾಗಿ ವೀರಶೈವ ಲಿಂಗಾಯತರ ಅವನತಿ ಆಗುತ್ತಿರುವ ಬಗ್ಗೆ ಹಲವು ವಿಚಾರಗಳು ಕುರಿತು ಶ್ರೀಗಳು ಚರ್ಚೆ ನಡೆಸಿದ್ದಾರೆ. ಈ ವೇಳೆ ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬದಲಾವಣೆ ಮಾಡಬೇಕೆಂದು ಒತ್ತಡ ಕೇಳಿ ಬಂದುದೆ. ಮಾರ್ಚ್31ರ ಒಳಗೆ ಧಾರವಾಡ ಅಭ್ಯರ್ಥಿಯನ್ನು ಬದಲಾವಣೆ ಮಾಡಬೇಕು. ಈ ಬಗ್ಗೆ ಬಿಜೆಪಿ ಮನವಿ ಮಾಡಲಾಗುವುದು. ಒಂದು ವೇಳೆ ಮಾಡದಿದ್ದರೆ ಏಪ್ರಿಲ್ 2ರಂದು ದಿಂಗಾಲೇಶ್ವರ ಶ್ರೀಗಳ ಕಣಕ್ಕಿಳಿಸುವ ಕುರಿತು ನಿರ್ಧಾರ ಮಾಡಲಾಗುತ್ತದೆ ಎಂಬುದಾಗಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಕಣಕ್ಕೆ ಇಳಿಸಬೇಕೋ ಬೇಡವೋ ಎಂಬುದರ ಬಗ್ಗೆ ಮಠಾಧೀಶರಿಂದ ಸಲಹೆ ಪಡೆಯಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ವಿರುದ್ಧ ಕಣಕ್ಕೆ ಇಳಿಸುವುದು, ಲಿಂಗಾಯತ ಮತ ವಿಭಜನೆಯಿಂದ ಆಗುವ ಹಾನಿ ಲಾಭ ಕುರಿತು ಮಠಾಧೀಶರು ಚರ್ಚೆ ನಡೆಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment