ಮಾಡಾಳ್​ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿಸಿದ್ದು ಜಿ.ಎಂ.ಸಿದ್ದೇಶ್ವರ್ : ಶಾಮನೂರು ಶಿವಶಂಕರಪ್ಪ ಹೇಳಿಕೆ

1 Min Read

ದಾವಣಗೆರೆ: ದಾವಣಗೆರೆಯ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್​ ಅವರೇ ಅವರದ್ದೇ ಪಕ್ಷದ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಮನೆ ಮೇಲೆ ದಾಳಿ ಮಾಡಿಸಿದ್ದಾರೆ ಎಂದು

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಎಂ.ಸಿದ್ದೇಶ್ವರ್​ ಅವರೇ ಈ ದಾಳಿ ಮಾಡಿಸಿದ್ದಾರೆ ಎಂದು ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ. ಇದು ಅವರ ವೈಯಕ್ತಿಕ ವಿಚಾರ. ಅವರ ಪಕ್ಷದ ವ್ಯವಹಾರ ನಮಗ್ಯಾಕೆ ಎಂದರು.

ಮಾಡಾಳ್ ವಿರುಪಾಕ್ಷಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನೆ (ಮಾ.3) ದಾಳಿ ಮಾಡಿ, 2,800 ಗ್ರಾಂ ಚಿನ್ನಾಭರಣ, 20 ಕೆ.ಜಿ ಬೆಳ್ಳಿ ಆಭರಣಗಳು, 16.5 ಲಕ್ಷ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *