ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.30 : ಇಂದು ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗ, ಹಾಸನ, ಕಲಬುರಗಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆಯ ಆರೋಪದಡಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆ ಪರಿಶೀಲನೆ ಜೊತೆ ಶೋಧ ಕಾರ್ಯ ನಡೆಸಿದ್ದಾರೆ.
ಇಂದು ಬೆಳ್ ಬೆಳಿಗ್ಗೆನೇ ಜಿಲ್ಲೆಯ ಹಿರಿಯೂರಿನ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ಅವರ ಹಿರಿಯೂರಿನ ಚಂದ್ರಾ ಲೇಔಟ್ ನಲ್ಲಿರುವ ಅವರ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದಾರೆ.
ಈ ವೇಳೆ ಸುಮಾರು 400 ಗ್ರಾಂ ನಷ್ಟು ಚಿನ್ನ, ಬೆಳ್ಳಿ ಆಭರಣಗಳು ಮತ್ತು ಸುಮಾರು ಒಂದೂವರೆ ಲಕ್ಷ ರೂಪಾಯಿಯಷ್ಟು ನಗದು ಹಣ ಪತ್ತೆಯಾಗಿದೆ. ಸದ್ಯ ಇವೆಲ್ಲವನ್ನೂ ವಶಕ್ಕೆ ಪಡೆದಿರುವ ಲೋಕಾಯುಕ್ತರು ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದಾರೆ.
ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಅವರ ಹಿರಿಯೂರಿನ ಕುವೆಂಪು ನಗರದ ಮನೆ ಮೇಲೆ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಬಜೆಟ್ ಲೆಕ್ಕಚಾರ ; ಜನರಿಗಿಂತ ಸಚಿವರಿಗೆ ನಿರೀಕ್ಷೆ, ತುಮಕೂರಿಗೆ ಹೆಚ್ಚು ಅನುದಾನ ತರುವ ತವಕ..!! ಬೆಂಗಳೂರು; ಮಾರ್ಚ್ 7 ರಾಜ್ಯ…
ಸುದ್ದಿಒನ್ ಪ್ರತಿದಿನ ಬೆಳಿಗ್ಗೆ ನಿಂಬೆರಸ ಮತ್ತು ಅರಿಶಿನ ಬೆರೆಸಿದ ಪಾನೀಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನಿಂಬೆ ಮತ್ತು ಅರಿಶಿನ…
ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ…
ಚಿತ್ರದುರ್ಗ. ಫೆ.21: ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ…
ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ…
ಮೈಸೂರು: ತಾಯಿ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳಿಂದ ಅವಸ್ಥೆಯಾಗಿದೆ. ಮೊದಲೇ ಬಿಸಿಲಿಗೆ ಒಣಗಿದ ಬೆಟ್ಟಕ್ಕೆ ಕಿಡಿತಾಕಿಸಿದ್ದಾರೆ. ಇದೀಗ ಆ ಕಿಡಿ ಜೋರಾಗಿಯೇ…