ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 14 : ಕೋಟೆನಾಡು ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಶಾಕ್ ನೀಡಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಕೃಷಿ ಇಲಾಖೆ ಎಡಿ (ಹೆಚ್ಚುವರಿ ನಿರ್ದೇಶಕ) ಚಂದ್ರ ಕುಮಾರ್ ಅವರ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದೆ.
ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ, ಪಿಐ ಮಂಜುನಾಥ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದೆ. ಚಂದ್ರಕಾಂತ್ ಅವರಿಗೆ ಸೇರಿದ 2 ಮನೆ ಮತ್ತು ಚಿತ್ರದುರ್ಗದ ಕೃಷಿ ಇಲಾಖೆ ಕಚೇರಿ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ತರಳಬಾಳು ನಗರ, ಹೊಳಲ್ಕೆರೆ ತಾಲೂಕಿನ ಟಿ ನುಲೇನೂರು ಗ್ರಾಮದ ಮನೆಗಳ ಮೇಲೆ ಸಹ ದಾಳಿ ನಡೆಸಿದ್ದು, ದಾಖಲೆಗಳ ಶೋಧ ನಡೆಸಿದ್ದಾರೆ.


