Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಲಂಚ ಕೇಳೋ ಅಧಿಕಾರಿಗಳಿಗೆ ಈ ರೈತನ ರೀತಿ ಬುದ್ಧಿ ಕಲಿಸಬೇಕು ನೋಡಿ..!

---Advertisement---

ಹಾವೇರಿ: ಲಂಚ..ಲಂಚ..ಲಂಚ.. ಎಲ್ಲಿ ನೋಡಿದ್ರು, ಯಾವ ಕೆಲಸ ಆಗಬೇಕು ಎಂದರೂ ಇದಿಲ್ಲದೆ ಹೋದರೆ ಏನು ನಡೆಯಲ್ಲ. ಲಂಚ ಕೊಟ್ಟು ಕೊಟ್ಟು ಸುಸ್ತಾಗಿ ಹೋಗಿದ್ದಾರೆ ಜನ. ಗ್ರಾಮ ಪಂಚಾಯ್ತಿಯಿಂದ ಹಿಡಿದು ದೊಡ್ಡ ದೊಡ್ಡ ಕಚೇರಿಗಳಲ್ಲೂ ನೇರವಾಗಿಯೇ ಲಂಚಕ್ಕೆ ಬೇಡಿಕೆ ಇಡುತ್ತಾರೆ. ಆದ್ರೆ ಎಲ್ಲರೂ ಈ ರೈತನಂತೆ ಬುದ್ಧಿವಂತರಾಗಿ, ಧೈರ್ಯವಾಗಿ ನಿಂತರೆ ಲಂಚ ಮುಕ್ತ ಮಾಡುವುದು ತೀರಾ ಕಷ್ಟ ಸಾಧ್ಯವಲ್ಲ.

ಈ ಘಟನೆ ನಡೆದಿರುವುದು ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲಿ. ಯಲ್ಲಪ್ಪ ರಾಣೋಜಿ ಎಂಬ ರೈತ ತನ್ನ ಮನೆಯ ಖಾತೆ ಬದಲಾಯಿಸುವುದಕ್ಕೆ ಜಿಲ್ಲೆಯ ಸವಣೂರಿನ ಪುರಸಭೆಗೆ ಬಂದಿದ್ದಾರೆ. ಅಲ್ಲಿ ಮೊದಲಿದ್ದ ಅಧಿಕಾರಿ ಹಣ ಕೇಳಿದ್ದಾರೆ. ಪಾಪ ಈ ರೈತ ಹಾಗೋ ಹೀಗೋ ಒದಗಿಸಿ ಹಣ ಕೊಟ್ಟಿದ್ದಾರೆ. ಹಣ ತಿಂದವ ಕೆಲಸವನ್ನು ಮಾಡಿಕೊಡದೆ, ಅಲ್ಲಿಂದ ವರ್ಗಾವಣೆಯಾಗಿದ್ದಾರೆ.

ಈಗ ಆ ಜಾಗಕ್ಕೆ ಮತ್ತೊಬ್ಬ ಅಧಿಕಾರಿ ಬಂದಿದ್ದು, ಮತ್ತೆ 25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಕಂಗೆಟ್ಟ ಯಲ್ಲಪ್ಪ, ತನ್ನಲ್ಲಿದ್ದ ಎತ್ತುಗಳನ್ನು ಕರೆದುಕೊಂಡು ಬಂದು, ಸಾರ್ ನನ್ನ ಬಳಿ ನೀವೂ ಕೇಳಿದಷ್ಟು ಹಣವಿಲ್ಲ. ನಾನು ಹಣ ನೀಡುವ ತನಕ ಈ ಎತ್ತುಗಳನ್ನು ಇಟ್ಟುಕೊಳ್ಳಿ ಎಂದು ಹೇಳಿದ್ದಾರೆ. ರೈತನ ನಡೆಗೆ ಅಧಿಕಾರಿಗಳು ದಂಗಾಗಿದ್ದಾರೆ.

ಇನ್ನು ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, 40 ಪರ್ಸೆಂಟ್ ಸರ್ಕಾರ ರೈತರನ್ನು ಬಿಟ್ಟಿಲ್ಲ. ಪೇಸಿಎಂ ಬಸವರಾಜ್ ಬೊಮ್ಮಾಯಿ ಯಾರು ಲಂಚ ಕೊಡುತ್ತಾರೋ ಅವರ ಪರ ಕೆಲಸ ಮಾಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...