Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಆರನೇ ದಿನಕ್ಕೆ ಲಾರಿ ಮಾಲೀಕರು ಹಾಗೂ ಚಾಲಕರ ಧರಣಿ : ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭೇಟಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್. 10  : ವೇದಾಂತ ಗಣಿ ಗುತ್ತಿಗೆ ಕಂಪನಿಯಿಂದ ಮೂರನೆ ಗೇಟ್ ಮುಖಾಂತರ ಕಳೆದ ಹದಿನೈದು ವರ್ಷಗಳಿಂದಲೂ ಅದಿರು ಸಾಗಿಸುತ್ತಿದ್ದ ಲಾರಿಗಳ ಸಂಚಾರವನ್ನು ಕೆಲವು ಪಟ್ಟಭದ್ರಹಿತಾಸಕ್ತಿಗಳು ಮುಚ್ಚಿಸಿರುವುದನ್ನು ವಿರೋಧಿಸಿ ಆರು ದಿನಗಳಿಂದ ಒನಕೆ ಓಬವ್ವ ವೃತ್ತದಲ್ಲಿ ಲಾರಿ ಮಾಲೀಕರು ಹಾಗೂ ಚಾಲಕರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.

ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಿಂದ ಒಂದುವರೆ ಸಾವಿರ ಲಾರಿಗಳು ಮೂರನೆ ಗೇಟ್ ಮುಖಾಂತರ ಅದಿರನ್ನು ಸಾಗಿಸುತ್ತಿದ್ದವು. ಸ.ನಂ. 5, 6 ರ ಬಿದಿರು ಬೊಮ್ಮೇನಹಳ್ಳಿಯಲ್ಲಿ ಲಾರಿಗಳನ್ನು ಅರ್ಧ ಕಿ.ಮೀ. ಸಂಚರಿಸಲು ಅರಣ್ಯ ಇಲಾಖೆಯವರು ಅಡ್ಡಿಪಡಿಸುತ್ತಿದ್ದಾರೆ.
ಪಹಣಿಯಲ್ಲಿ ಕಂದಾಯ ಇಲಾಖೆಗೆ ಸೇರಿದ ಜಮೀನು ಎಂದು ನಮೂದಾಗಿದೆ. 2017 ರ ನೋಟಿಫಿಕೇಷನ್ ಪ್ರಕಾರ 2023 ರವರೆಗೂ ನಿರಂತರವಾಗಿ ಅದಿರನ್ನು ಸಾಗಿಸಲಾಗುತ್ತಿತ್ತು. ಈಗ ಏಕಾಏಕಿ ಲಾರಿಗಳ ಸಂಚಾರ ಸ್ಥಗಿತಗೊಳಿಸಿರುವುದರಿಂದ ಇದನ್ನೆ ನಂಬಿಕೊಂಡಿರುವ 25 ಸಾವಿರಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬಂದಿವೆ ಎಂದು ಮುಷ್ಕರ ನಿರತ ಲಾರಿ ಮಾಲೀಕರು ಹಾಗೂ ಚಾಲಕರುಗಳು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಅಳಲು ತೋಡಿಕೊಂಡರು.

ಲಾರಿ ಮಾಲೀಕರು, ಚಾಲಕರುಗಳ ವೇದನೆ ಆಲಿಸಿದ ಸಚಿವ ಡಿ.ಸುಧಾಕರ್ ಸಂಬಂಧಪಟ್ಟ ಗಣಿ ಹಾಗೂ ಅರಣ್ಯ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಸೋಮವಾರದ ನಂತರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಧರಣಿನಿರತರಿಗೆ ಭರವಸೆ ನೀಡಿದರು.

ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕ ಟಿ.ರಘುಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕೆ.ಪಿ.ಸಿ.ಸಿ. ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...