ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಬೇಕರಿಗೆ ನುಗ್ಗಿದ ಪರಿಣಾಮ, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಕೋಳಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ರಂಗಶಾಮಯ್ಯ ಹಾಗೂ ಬೈಲಪ್ಪ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಮಾಹಿತಿ ದೊರೆತಿಲ್ಲ. ಲಾರಿ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.
ಆ ಲಾರಿ ತೀರಾ ಹಳೆಯದಾಗಿತ್ತು. ಆದರೂ ಚಾಲಕ ಆ ಗಾಡಿಯನ್ನ ಓಡಿಸಿದ್ದಾನೆ. ಇದರ ಪರಿಣಾಮ ಲಾರಿ ಕಂಟ್ರೋಲ್ ಗೆ ಸಿಕ್ಕಿಲ್ಲ. ಲಾರಿ ಗುದ್ದಿದ ಪರಿಣಾಮ ಮೂವರ ಸ್ಥಿತಿ ಗಂಭೀರವಾಗಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ಪ್ರಯತ್ನ ಪಟ್ಟರು ಸಹ ಆಗಲಿಲ್ಲ. ಆಂಬ್ಯುಲೆನ್ಸ್ ಗೆ ಕರೆ ಮಾಡಿದರು ತಕ್ಷಣ ಬರಲಿಲ್ಲ. ಇದು ಅವ್ಯವಸ್ಥಿತೆಗೆ ಹಿಡಿದ ಕೈಗನ್ನಡಿಯಂತೆ ಕಂಡಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆಯು ಸಿಗದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಈ ವಿಷಯ ತಿಳಿದ ಗೃಹ ಸಚಿವರಾದ ಜಿ ಪರಮೇಶ್ವರ್ ಅವರು, ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಗೊಬ್ಬರ ತುಂಬಿದ್ದ ಲಾರಿ ಅಂಗಡಿಗೆ ನುಗ್ಗಿದ ಪರಿಣಾಮ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಸುದ್ದಿ ತಿಳಿದು ಆಘಾತವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ. ದುಖತಪ್ತ ಕುಟುಂಬವರ್ಗದವರಿಗೆ ನನ್ನ ತೀವ್ರ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ. ಎಲ್ಲಾ ಗ್ರಾಮದಲ್ಲೂ ವಾಹನಗಳು ಓಡಾಡುವಂತ ರಸ್ತೆಗಳಲ್ಲಿ ಹಂಪ್ಸ್ ಗಳನ್ನ ಹಾಕಿರ್ತಾರೆ. ಆದರೆ ಈ ಗ್ರಾಮದಲ್ಲಿ ಆ ರೀತಿಯ ಹಂಪ್ಸ್ ಗಳು ಇಲ್ಲವಾಗಿರೋ ಕಾರಣವೂ ಅಪಘಾತಕ್ಕೆ ಕಾರಣವಾಗಿರಬಹುದು ಎನ್ನಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











