ಮುಂಬಯಿ : ಮಸೀದಿ ಧ್ವನಿವರ್ಧಕಗಳಲ್ಲಿ ಅಝಾನ್ ಕೇಳಿಸಿದರೆ ಅದಕ್ಕೆ ಪ್ರತಿಯಾಗಿ ಹನುಮಾನ್ ಚಾಲೀಸಾ ಕೇಳಿಸಲಾಗುವುದು ಎಂದು ರಾಜ್ ಠಾಕ್ರೆ ಎಚ್ಚರಿಸಿದ್ದು ಎಲ್ಲರಿಗೂ ತಿಳಿದಿದೆ. ಈ ನಿಟ್ಟಿನಲ್ಲಿ ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಯಲು ಮೇ 3 ರ ಗಡುವು ವಿಧಿಸಲಾಗಿತ್ತು. ಅಝಾನ್ ನಿಂದಾಗಿ ಶಬ್ದ ಮಾಲಿನ್ಯ ಉಂಟಾಗುತ್ತದೆ ಎಂಬುದು ಅವರ ವಾದ. ಅವರು ನೀಡಿದ್ದ ಗಡುವು ಮುಗಿದ ನಂತರ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
ಏತನ್ಮಧ್ಯೆ, ಮುಂಬೈ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಝಾನ್ ವೇಳೆ ಸ್ವಯಂಪ್ರೇರಣೆಯಿಂದ ಸ್ಪೀಕರುಗಳನ್ನು ಬಂದ್ ಮಾಡಲಾಗಿತ್ತು. ಪೊಲೀಸರು ಮಸೀದಿ ಟ್ರಸ್ಟಿಗಳೊಂದಿಗೆ ಸಭೆಗಳನ್ನು ನಡೆಸಿ, ಬೆಳಗಿನ ಪ್ರಾರ್ಥನೆಯ ಸಮಯದಲ್ಲಿ ಧ್ವನಿವರ್ಧಕಗಳನ್ನು ಬಂದ್ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಅವರಿಗೆ ವಿವರಿಸಿದರು.
ಇದರಿಂದ ಹಲವೆಡೆ ಧ್ವನಿವರ್ಧಕಗಳು ಸ್ತಬ್ಧಗೊಂಡವು. ಈ ಅನುಕ್ರಮದಲ್ಲಿ ಎಂಎನ್ಎಸ್ ಕಾರ್ಯಕರ್ತರು ಮಸೀದಿಗಳ ಬಳಿಗೆ ತೆರಳಿ ಧ್ವನಿವರ್ಧಕಗಳನ್ನು ಬಂದ್ ಮಾಡಿರುವುದನ್ನು ಗಮನಿಸಿದರು.
ಹಾಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಲ್ಲಿನ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಏತನ್ಮಧ್ಯೆ, ಔರಂಗಾಬಾದ್ ಪೊಲೀಸರು ರಾಜ್ ಠಾಕ್ರೆ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಬುಧವಾರ ಬೆಳಗ್ಗೆ ರಾಜ್ ಠಾಕ್ರೆ ಮನೆಗೆ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ಠಾಕ್ರೆ Vs ಠಾಕ್ರೆ
ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಠಾಕ್ರೆ ಕುಟುಂಬದ ರಾಜಕೀಯ ವೈಷಮ್ಯ ಧ್ವನಿವರ್ಧಕಗಳ ಸಮಸ್ಯೆಯಿಂದ ತೀವ್ರವಾಗುತ್ತಿದೆ. ಆಡಳಿತಾರೂಢ ಶಿವಸೇನೆ ಪಕ್ಷವು ಎಂಎನ್ಎಸ್ ಅನ್ನು ಬಿಜೆಪಿ ಬಿ ಟೀಮ್ ಎಂದು ಬಣ್ಣಿಸುತ್ತಿದೆ. ಶಿವಸೇನೆ ಹಿಂದುತ್ವದ ಮತ ಬ್ಯಾಂಕ್ನೊಂದಿಗೆ ಎಂಎನ್ಎಸ್ ಮೂಲಕ ಮತಗಳನ್ನು ಕಸಿಯಲು ಯತ್ನಿಸುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…