Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ಲವ್ ಸೀಸನ್ಸ್’ ಟೀಸರ್ ಬಿಡುಗಡೆ: ಹೊಸ ತಂಡದಿಂದ ಪ್ರೇಮಕಥೆಗೆ ಹೊಸ ಸ್ಪರ್ಶ

---Advertisement---

ಸುದ್ದಿಒನ್, ಬೆಂಗಳೂರು, ಏಪ್ರಿಲ್. 16 : ಕನ್ನಡ ಚಿತ್ರರಂಗಕ್ಕೆ ಹೊಸ ಪ್ರತಿಭೆಗಳ ತಂಡದ ಪ್ರವೇಶವಾಗಿರುವ ‘ಲವ್ ಸೀಸನ್ಸ್’ ಚಿತ್ರದ ಟೀಸರ್ ಅಧಿಕೃತವಾಗಿ ಬಿಡುಗಡೆಯಾಗಿದೆ. ಇತ್ತೀಚೆಗೆ ಚಿತ್ರೀಕರಣ ಪೂರ್ಣಗೊಳಿಸಿದ್ದ ಈ ಚಿತ್ರವು, ಟೀಸರ್ ಬಿಡುಗಡೆ ಕಾರ್ಯಕ್ರಮದ ಮೂಲಕ ಸಿನಿಪ್ರೇಮಿಗಳ ಗಮನ ಸೆಳೆದಿದೆ.

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಾಜೇಶ್ ನಟರಂಗ, ನಿರ್ದೇಶಕ ಕೃತ್ವಿಕ್ ಅವರ ಕೆಲಸವನ್ನು ಮೆಚ್ಚಿಕೊಂಡು ಮಾತನಾಡಿದರು. ತಾವು ಚಿತ್ರದಲ್ಲಿ ಜವಾಬ್ದಾರಿಯುತ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ಸುಳಿವು ನೀಡಿದ ಅವರು, ಪ್ರೀತಿ ಯಾವ ಕಾಲಕ್ಕೂ ಹಳೆಯದಾಗದ ವಿಷಯವಾಗಿದ್ದು, ಅದನ್ನೇ ಆಧಾರವನ್ನಾಗಿ ಮಾಡಿಕೊಂಡು ಸಿನಿಮಾ ರೂಪುಗೊಂಡಿದೆ ಎಂದು ತಿಳಿಸಿದರು. ಚಿತ್ರವನ್ನು ಪ್ರೇಕ್ಷಕರು ಬೆಂಬಲಿಸಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.

ಈ ಚಿತ್ರದ ಮೂಲಕ ಎನ್.ಆರ್ ಮಂಜುನಾಥ (ನೀಲೇರಿ) ನಿರ್ಮಾಪಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ರಂಗಭೂಮಿಯಲ್ಲಿ ಅನುಭವ ಹೊಂದಿರುವ ಕೃತ್ವಿಕ್, ‘ಲವ್ ಸೀಸನ್ಸ್’ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ. ನಾಯಕನಾಗಿ ಮುಕುಂದ ರಾಮಸ್ವಾಮಿ ಹಾಗೂ ನಾಯಕಿಯರಾಗಿ ದಿಯಾ ಕೀರ್ತಿ ಮತ್ತು ಚಂದನಾ ಗೌಡ ಅಭಿನಯಿಸಿದ್ದು, ತಮ್ಮ ಪಾತ್ರಗಳ ಕುರಿತು ಅವರು ಕಾರ್ಯಕ್ರಮದಲ್ಲಿ ಹಂಚಿಕೊಂಡರು.

ಸಂಗೀತ ನಿರ್ದೇಶಕ ವೀರ್ ಸಮರ್ಥ್, ಚಿತ್ರದ ಹಾಡುಗಳು ವಿಭಿನ್ನ ಶೈಲಿಯಲ್ಲಿದ್ದು ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿವೆ ಎಂದು ಹೇಳಿದರು. ಟೀಸರ್ ಮೂಲಕವೇ ಚಿತ್ರ ಜೂನ್ ತಿಂಗಳಲ್ಲಿ ಬಿಡುಗಡೆಯಾಗುವ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹಾಡುಗಳು ಹಾಗೂ ಟ್ರೈಲರ್ ಹಂತ ಹಂತವಾಗಿ ಬಿಡುಗಡೆಯಾಗಲಿದೆ.
‘ಲವ್ ಸೀಸನ್ಸ್’ ಚಿತ್ರವು ನಂಬಿಕೆಯ ಮಹತ್ವವನ್ನು ಪ್ರತಿಬಿಂಬಿಸುವ ಪ್ರೇಮಕಥೆಯನ್ನು ಒಳಗೊಂಡಿದ್ದು, ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಎನ್.ಆರ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಕೃತ್ವಿಕ್ ನಿರ್ದೇಶನ, ವೀರ್ ಸಮರ್ಥ್ ಸಂಗೀತ, ಅವಿನಾಶ ಶಾಸ್ತ್ರಿ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ ಮತ್ತು ಭಜರಂಗಿ ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿತ್ರದಲ್ಲಿ ಮಂಡ್ಯ ರಮೇಶ್, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...