ನಾಲ್ಕು ಜನರನ್ನು ಬಲಿಪಡೆದ ಲೆವಾನಾ ಹೋಟೆಲ್ ಕೆಡವಲು ನಿರ್ಧಾರ

ಹೊಸದಿಲ್ಲಿ: ಸೋಮವಾರ (ಸೆಪ್ಟೆಂಬರ್ 5, 2022) ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟು ಕನಿಷ್ಠ 10 ಮಂದಿ ಗಾಯಗೊಂಡಿರುವ ಲಕ್ನೋದ ಲೆವಾನಾ ಸೂಟ್ಸ್ ಹೋಟೆಲ್ ಅನ್ನು ಈಗ ಕೆಡವಲಾಗುವುದು ಎಂದು ಅಧಿಕಾರಿಗಳನ್ನು ತಿಳಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು, ಹೋಟೆಲ್‌ನ ಇಬ್ಬರು ಮಾಲೀಕರು ಮತ್ತು ಅದರ ಜನರಲ್ ಮ್ಯಾನೇಜರ್‌ಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಮತ್ತು ನಾಲ್ಕು ಅಂತಸ್ತಿನ ಕಟ್ಟಡವನ್ನು ಮಂಗಳವಾರ ಸೀಲ್ ಮಾಡಲಾಗುವುದು ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಇಂದ್ರಮಣಿ ತ್ರಿಪಾಠಿ ಹೇಳಿದ್ದಾರೆ.

ಹಲವಾರು ಗಂಟೆಗಳ ಕಾಲ, ರಕ್ಷಣಾ ತಂಡಗಳು ಲಕ್ನೋದ ವಾಣಿಜ್ಯ ಕೇಂದ್ರವಾದ ಹಜರತ್‌ಗಂಜ್‌ನಲ್ಲಿರುವ ಮದನ್ ಮೋಹನ್ ಮಾಲ್ವಿಯಾ ಮಾರ್ಗದಲ್ಲಿರುವ ಲೆವಾನಾ ಸೂಟ್ಸ್‌ನ ಆವರಣದಲ್ಲಿ ಯಾರಾದರೂ ಸಿಕ್ಕಿಬಿದ್ದಿದ್ದಾರೆಯೇ ಎಂದು ಪರಿಶೀಲಿಸಿದರು. ಬೆಂಕಿ ನಂದಿಸಲು ಆರು ಗಂಟೆಗೂ ಹೆಚ್ಚು ಸಮಯ ತೆಗೆದುಕೊಂಡಿದ್ದು, ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರಂಭದಲ್ಲಿ 10 ಜನರನ್ನು ಶ್ಯಾಮ ಪ್ರಸಾದ್ ಮುಖರ್ಜಿ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು. ಈ ಪೈಕಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇನ್ನೂ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮಾಲಿಕರಾದ ರಾಹುಲ್ ಅಗರ್ವಾಲ್, ರೋಹಿತ್ ಅಗರ್ವಾಲ್, ಪವನ್ ಅಗರ್ವಾಲ್ ಮತ್ತು ಹೋಟೆಲ್ ಜನರಲ್ ಮ್ಯಾನೇಜರ್ ಸಾಗರ್ ಶ್ರೀವಾಸ್ತವ ವಿರುದ್ಧ ಐಪಿಸಿ ಸೆಕ್ಷನ್ 304 (ಅಪರಾಧ ನರಹತ್ಯೆ ಕೊಲೆ ಯತ್ನ) ಮತ್ತು 308 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಿಯೂಷ್ ಮೊರ್ಡಿಯಾ ತಿಳಿಸಿದ್ದಾರೆ.

ಲಕ್ನೋ ವಿಭಾಗೀಯ ಆಯುಕ್ತ ರೋಶನ್ ಜೇಕಬ್ ಅವರು ಮೇ 7 ರಂದು ವಲಯ ಅಧಿಕಾರಿ ಹೋಟೆಲ್‌ಗೆ ನೋಟಿಸ್ ಕಳುಹಿಸಿದ್ದಾರೆ, ಅದಕ್ಕೆ ಅವರು ಮೇ 12 ರಂದು ಉತ್ತರಿಸಿದರು ಮತ್ತು 2021 ರಿಂದ 2024 ರವರೆಗೆ ಅಗ್ನಿಶಾಮಕ ಎನ್‌ಒಸಿ (ನಿರಾಕ್ಷೇಪಣಾ ಪ್ರಮಾಣಪತ್ರ) ನವೀಕರಣದ (ಪ್ರಮಾಣಪತ್ರ) ಪ್ರಸ್ತುತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *