Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೇನೆಯಲ್ಲಿ ಕೆಲಸದ ಆಮಿಷ , 150 ಯುವಕರಿಗೆ ಮೋಸ : ಚಿತ್ರದುರ್ಗದಲ್ಲಿ ವಂಚಕ ಅರೆಸ್ಟ್…!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.24 : ಯುವಕರಿಗೆ ದೇಶ ಸೇವೆ ಮಾಡಬೇಕು ಎಂಬ ಆಸೆ ಇರುತ್ತೆ. ಅಂತ ಆಸೆ ಇದ್ದರೆ ಅದಕ್ಕಿಂತ ಪುಣ್ಯ ಮತ್ತೊಂದಿಲ್ಲ. ಆದರೆ ದೇಶಸೇವೆ ಮಾಡುವ ಕೆಲಸದಲ್ಲೂ ಮೋಸ ಮಾಡುವವರು ಹುಟ್ಟಿಕೊಂಡಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ, ಒಂದಲ್ಲ ಎರಡಲ್ಲ 150 ಜನ ಯುವಕರಿಗೆ ಮೋಸ ಮಾಡಿದ್ದಾನೆ.

ಸುಮಾರು 1 ಕೋಟಿ ವಂಚಿಸಿದ್ದ  ಆರೋಪಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್ ಮೋಸ ಮಾಡಿದ ಆರೋಪದ ಮೇಲೆ ಅರೆಸ್ಟ್ ಆಗಿದ್ದಾನೆ. ಸೇನೆಗೆಂದು ಸೇರಲು ಬಯಸುವ ಯುವಕರಿಗೆ, ಶಿವರಾಜ್ ವಟಗಲ್, ತಾನೂ ಭಾರತೀಯ ಸೇನೆಯಲ್ಲಿ  ಕಾರ್ಯನಿರ್ವಹಿಸಿದ್ದೇನೆ ಎಂದು ಸುಳ್ಳು ಹೇಳಿ ನಂಬಿಸುತ್ತಿದ್ದನು. ಅಷ್ಟೇ ಅಲ್ಲ ಯುವಕರನ್ನು ನಂಬಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದನು. ಈ ದಾಖಲೆಗಳನ್ನು ಯುವಕರಿಗೆ ತೋರಿಸಿ ನಂಬಿಸುತ್ತಿದ್ದನು. ಭಾರತೀಯ ಸೇನೆ, ವಾಯುಸೇನೆ ಮತ್ತು ನೌಕಾಪಡೆಯಲ್ಲಿ ಉದ್ಯೋಗ  ಕೊಡಿಸುತ್ತೇನೆ ಎಂದು ಶಿವರಾಜ್ ವಟಗಲ್  150 ಯುವಕರಿಗೆ 1 ಕೋಟಿ ರೂಪಾಯಿ ವಂಚಿಸಿದ್ದನು.

ಈತನಿಂದ ವಂಚನೆಗೆ ಒಳಗಾದ ಪ್ರಕಾಶ್ ಎಂಬುವರು ಶಿವರಾಜ್ ವಟಗಲ್ ವಿರುದ್ಧ ಚಿತ್ರದುರ್ಗದ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ಜಂಟಿಯಾಗಿ ಕಾರ್ಯಾಚರಣೆ ಇಳಿದಿತ್ತು. ಅಕ್ಟೋಬರ್ 20 ರಂದು ಮಿಲಿಟರಿ ಗುಪ್ತಚರ, ಬೆಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಪೊಲೀಸ್ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಚಿತ್ರದುರ್ಗದಲ್ಲಿ ವಂಚಕ ಶಿವರಾಜ್​ ಮತ್ತು ಆತನ ಸಂಗಾತಿ ಭೀಮವ್ವರನ್ನು ಬಂಧಿಸಿದರು.

ಈತ ದಾವಣಗೆರೆ, ಚಿತ್ರದುರ್ಗ ಮಾತ್ರವಲ್ಲದೇ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ವಂಚನೆ ಮಾಡಿರುವುದು ಬಯಲಾಗಿದೆ. ಈ ಸಂಬಂಧ ಶಿವರಾಜ್​ ಮತ್ತು ಆತನ ಸಂಗಾತಿ ಬೀಮವ್ವ ವಿರುದ್ಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಶಿವರಾಜ್ ನಕಲಿ ನಕಲಿ ಗುರುತಿನ ಚೀಟಿಗಳು ಮತ್ತು ಸೇನಾ ನೇಮಕಾತಿ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!