ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ಆ. 13 : ಭೋವಿ ಅಭಿವೃದ್ದಿ ನಿಮಗಮದ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯವರಾದ ಎಂ.ರಾಮಪ್ಪರವರು ಆ. 15 ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ವೀಧಿಯಲ್ಲಿನ ವೀಶ್ವಶ್ವೇರಯ್ಯ ದೊಡ್ಡ ಗೋಪುರದ 20 ನೇ ಮಹಡಿ ಯಲ್ಲಿನ ನಿಗಮದ ಕಚೇರಿಯಲ್ಲಿ ಅಧ್ಯಕ್ಷರಾಗಿ ಆಧಿಕಾರವನ್ನು ಸ್ವೀಕಾರ ಮಾಡಲಿದ್ದಾರೆ.
ಅಂದೇ ತಮ್ಮ ಕಾರ್ಯಲಯದಲ್ಲಿ ಪೂಜೆಯನ್ನು ಇಟ್ಟುಕೊಂಡಿದ್ದಾರೆ. ರಾಮಪ್ಪರವರ ಅಭಿಮಾನಿಗಳು, ಹಿತೈಷಿಗಳು ಈ ಕಾರ್ಯ ಕ್ರಮಕ್ಕೆ ಆಗಮಿಸುವಂತೆ ಎಂ.ರಾಮಪ್ಪ ಅಭಿಮಾನಿಗಳ ಬಳಗದವತಿಯಿಂದ ಕಾಂಗ್ರೆಸ್ ಮುಖಂಡರಾದ ಮುದಸಿರ್ನವಾಜ್, ಜಿ.ಪಂ.ಮಾಜಿ ಸದಸ್ಯರಾದ ಅನಿಲ್ಕುಮಾರ್, ಕನಕದಾಸ್, ಜಿ.ತಿಪ್ಪೇಸ್ವಾಮಿ ಮನವಿ ಮಾಡಿದ್ದಾರೆ.





