Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮದಕರಿನಾಯಕನ ರಥಯಾತ್ರೆ ಹಾಗೂ ಬುಡಕಟ್ಟು ಉತ್ಸವ ತಾತ್ಕಾಲಿಕವಾಗಿ ಮುಂದೂಡಲಾಗಿದೆ : ಶಿವಣ್ಣ

Facebook
Twitter
Telegram
WhatsApp

ಚಿತ್ರದುರ್ಗ : ಬಿಜೆಪಿ ಎಸ್ಟಿ ಮೋರ್ಚಾದಿಂದ ಜೂ.3 ರಂದು ಚಿತ್ರದುರ್ಗದಿಂದ ಆರಂಭವಾಗಬೇಕಿದ್ದ ಮದಕರಿನಾಯಕನ ರಥಯಾತ್ರೆ ಹಾಗೂ ಬುಡಕಟ್ಟು ಉತ್ಸವವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಬಿಜೆಪಿ ಜಿಲ್ಲಾ ಎಸ್ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಶಿವಣ್ಣ ಹೇಳಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಿಜೆಪಿ. ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜ ಹವಾಲ್ದಾರ್‌ರವರು ಜೂ.3 ರಂದು ಕೋಟೆ ಮುಂಭಾಗ ಮದಕರಿನಾಯಕನ ಉತ್ಸವ ಹಾಗೂ ಬುಡಕಟ್ಟು ಉತ್ಸವಕ್ಕೆ ಚಾಲನೆ ನೀಡುವುದಾಗಿ ಚಿತ್ರದುರ್ಗದ ಬಿಜೆಪಿ.ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಿಳಿಸಿದ್ದರು. ಆದರೆ ನಾಯಕ ಸಮುದಾಯಕ್ಕೆ ಶೇ.7.5 ಮೀಸಲಾತಿ ನೀಡುವಂತೆ ಪ್ರಸನ್ನಾನಂದಸ್ವಾಮಿಗಳು 112 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಧರಣಿ ಕುಳಿತಿರುವ ಈ ಸಂದರ್ಭದಲ್ಲಿ ಮದಕರಿನಾಯಕನ ಉತ್ಸವ ಹಾಗೂ ಬುಡಕಟ್ಟು ಉತ್ಸವ ನಡೆಸುವುದು ಸಮಂಜಸವಲ್ಲ ಎನ್ನುವ ಕಾರಣಕ್ಕಾಗಿ ರಥೋತ್ಸವ ಹಾಗೂ ಬುಡಕಟ್ಟು ಉತ್ಸವವನ್ನು ಮುಂದೂಡಿದ್ದು, ಸರ್ಕಾರ ಮೀಸಲಾತಿಯನ್ನು ಘೋಷಿಸಿದ ನಂತರ ಮದಕರಿನಾಯಕನ ರಥೋತ್ಸವ ಹಾಗೂ ಬುಡಕಟ್ಟು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ನೂತನ ಸದಸ್ಯ ಪಾಪೇಶನಾಯಕ ಮಾತನಾಡಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸಮುದಾಯದ ಹದಿನೈದು ಶಾಸಕರ ನಿಯೋಗ ಹೋಗಿದ್ದರ ಪರಿಣಾಮವಾಗಿ ಸರ್ಕಾರ ವಾಲ್ಮೀಕಿ ಜಯಂತಿಯನ್ನು ಘೋಷಿಸಿತು. ಶೇ.7.5 ಮೀಸಲಾತಿಗಾಗಿ ನಮ್ಮ ಸ್ವಾಮೀಜಿಗಳು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ನವೆಂಬರ್ ಒಳಗೆ ಸರ್ಕಾರ ಮೀಸಲಾತಿಯನ್ನು ನೀಡಲಿದೆ ಎಂದು ಸಚಿವ ಶ್ರೀರಾಮುಲು ಭರವಸೆ ನೀಡಿದ್ದರಿಂದ ಮದಕರಿನಾಯಕ ರಥೋತ್ಸವ ಹಾಗೂ ಬುಡಕಟ್ಟು ಉತ್ಸವವನ್ನು ಮುಂದೂಡಲಾಗಿದೆ ಎಂದು ಹೇಳಿದರು.

ನಗರಸಭೆ ಸದಸ್ಯ ವೆಂಕಟೇಶ್ ಮಾತನಾಡುತ್ತ ಶೇ.7.5 ಮೀಸಲಾತಿಗಾಗಿ ನಮ್ಮ ಜನಾಂಗದ ಸ್ವಾಮೀಜಿ 112 ದಿನಗಳಿಂದ ಫ್ರೀಡಂ ಪಾರ್ಕಿನಲ್ಲಿ ಧರಣಿ ಕುಳಿತಿದ್ದಾರೆ. ರಾಜ್ಯ ಸರ್ಕಾರ ಮೀಸಲಾತಿಯನ್ನು ಘೋಷಿಸಿದ ಮೇಲೆ ನಮ್ಮ ಸಮಾಜದ ಎಲ್ಲಾ ಮುಖಂಡರು ಹಾಗೂ ಜನಾಂಗದವರೊಡನೆ ಚರ್ಚಿಸಿ ಸ್ವಾಮೀಜಿ ನೇತೃತ್ವದಲ್ಲಿಯೇ ಮದಕರಿನಾಯಕ ಜಯಂತಿ ಹಾಗೂ ಬುಡಕಟ್ಟು ಉತ್ಸವವನ್ನು ಆಚರಿಸಲಾಗುವುದು ಎಂದರು.

ಸೋಮೇಂದ್ರ ಬೆಳಗಟ್ಟ ಮಾತನಾಡಿ ಶೇ.7.5 ಮೀಸಲಾತಿಗಾಗಿ ನಮ್ಮ ಸಮುದಾಯದ ಸ್ವಾಮೀಜಿ ಧರಣಿ ಕುಳಿತಿರುವ ಈ ಪರಿಸ್ಥಿತಿಯಲ್ಲಿ ಮದಕರಿನಾಯಕನ ರಥೋತ್ಸವ, ಬುಡಕಟ್ಟು ಉತ್ಸವವನ್ನು ಆಚರಿಸುವುದರಲ್ಲಿ ಅರ್ಥವಿಲ್ಲ. ನಮ್ಮ ಜನಾಂಗದ ಯುವಕರು ಯಾರು ಸಾಮಾಜಿಕ ಜಾಲತಾಣಗಳಲ್ಲಿ ಮುಖಂಡರುಗಳನ್ನು ಅವಹೇಳನ ಮಾಡಬಾರದೆಂದು ವಿನಂತಿಸಿದರು.

ಬಿಜೆಪಿ. ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಎನ್.ಎಲ್. ನಾಯಕನಹಟ್ಟಿ ಮಂಡಲ ಎಸ್.ಟಿ.ಮೋರ್ಚಾ ಅಧ್ಯಕ್ಷ ಸಿ.ಬಿ.ಮೋಹನ್, ಪ್ರಧಾನ ಕಾರ್ಯದರ್ಶಿ ಬೆಂಕಿ ಗೋವಿಂದ್, ಎಸ್.ಟಿ.ಮೋರ್ಚಾ ಚಿತ್ರದುರ್ಗ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ವಸಂತ್‌ಕುಮಾರ್ ಟಿ.ಎಸ್. ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!