Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಂಚ ಪಡೆಯುವಾಗ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಮದಕರಿಪುರ PDO

Facebook
Twitter
Telegram
WhatsApp

ಚಿತ್ರದುರ್ಗ, (ಮಾ.07) : ತಾಲ್ಲೂಕಿನ ಮದಕರಿಪುರ ಗ್ರಾಮ ಪಂಚಾಯತಿ PDO ಅವರು ಶಾಲಾ ಶಿಕ್ಷಕರೋರ್ವರಿಂದ ಲಂಚ ಪಡೆಯುತ್ತಿರುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.

ಆರೋಪಿಯು ಚಳ್ಳಕೆರೆ ರಸ್ತೆಯ ಅಕ್ಷಯ ಗ್ಲೋಬಲ್ ಆಸ್ಪತ್ರೆ ಹಿಂಭಾಗದ ಶ್ರೀರಾಮ್ ಬಡಾವಣೆಯ ಪ್ರಾಥಮಿಕ ಶಾಲಾ ಶಿಕ್ಷಕರ ಖಾತೆ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ.

ಈ ಸಂಬಂಧವಾಗಿ ದೂರುದಾರರು ಎಸಿಬಿ ಠಾಣೆಗೆ ಹಾಜರಾಗಿ ನೀಡಿರುತ್ತಾರೆ. ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಂಡಿರುತ್ತಾರೆ.

ಇಂದು (ಸೋಮವಾರ) ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ದೂರುದಾರರೊಂದಿಗೆ ಮದಕರಿಪುರ ಗ್ರಾಮ ಪಂಚಾಯಿತಿ ಕಛೇರಿಗೆ ಹಾಜರಾಗಿ ತನ್ನ ಬಾಕಿಯಿದ್ದ ಕೆಲಸದ ಬಗ್ಗೆ ಪಿ.ಡಿ.ಓ.ರವರನ್ನು ಭೇಟಿ ಮಾಡಿ ವಿಚಾರಿಸಿದ್ದು, ಪಿ.ಡಿ.ಓ. ಲಂಚದ ಹಣವನ್ನು ನೀಡುವಂತೆ ತಮ್ಮ ಕೈಸನ್ನೆಯಿಂದ ಸೂಚಿಸಿದ್ದು ಪಿ.ಡಿ.ಓ.ರವರು ಸೂಚಿಸಿದಂತೆ 2ನೇ ಅಪಾದಿತೆ ದೂರುದಾರರು‌ ಲಂಚದ ಹಣವನ್ನು ಪಡೆದಿದ್ದು, ಆರೋಪಿತರನ್ನು ಟ್ರ್ಯಾಪ್ ಮಾಡಲಾಗಿದೆ.

ಆಪಾದಿತರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಕ್ಕೆ ಪಡೆಯಲಾಗಿರುತ್ತದೆ. ಅದೇ ವೇಳೆಯಲ್ಲಿ ಆಪಾದಿತರ ಮನೆಯ ಶೋಧನೆಯನ್ನು ಸಹ ಕೈಗೊಳ್ಳಲಾಯಿತು. ಶೋಧನಾ ಕಾರ್ಯವನ್ನು ಪಿ.ಐ. ಪ್ರವೀಣ್ ಕುಮಾರ್ ವಿ. ರವರ ತಂಡ ಕೈಗೊಂಡಿರುತ್ತದೆ. ಪ್ರಕರಣದ ತನಿಖೆ ಮುಂದುವರೆದಿದೆ.

ಆ ಸಂದರ್ಭದಲ್ಲಿ ಚಿತ್ರದುರ್ಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಾದ ಪ್ರತಾಪ್‌ರೆಡ್ಡಿ., ಡಿ.ವೈ.ಎಸ್.ಪಿ, ಹಾಗೂ ಉಮೇಶ್ ಕುಮಾರ್ ಎಸ್.ಎಮ್., ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಗಳಾದ ಶ್ರೀ ಎ. ಮಾರುತಿರಾಂ, ಹೆಚ್.ಸಿ., ಶ್ರೀ ಜಿ.ಎಸ್, ಓಬಣ್ಣ, ಹೆಚ್.ಸಿ., ಶ್ರೀ ಹರೀಶ್‌ಕುಮಾರ್, ಹೆಚ್.ಸಿ. ಶ್ರೀ ಫಕೃದ್ದೀನ್, ಪಿ.ಸಿ., ಶ್ರೀ ಕೆ.ಬಿ. ಯತಿರಾಜ, ಪಿ.ಸಿ., ಶ್ರೀ ಎಮ್. ಫಯಾಜ್, ಪಿ.ಸಿ. ಇವರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!