Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತುಮಕೂರಿನ ಕ್ಯಾತ್ಸಂದ್ರ ಬಳಿ ಮಾಡಾಳು ವಿರೂಪಾಕ್ಷಪ್ಪ ಅರೆಸ್ಟ್..!

---Advertisement---

 

ತುಮಕೂರು: ಲಂಚ ಪ್ರಕರಣದಲ್ಲಿ ದೂಷಿಯಾಗಿರುವ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಡಾಳು ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಬಂಧನದ ಭೀತಿ ವಿರೂಪಾಕ್ಷಪ್ಪ ಅವರಿಗೆ ಎದುರಾಗಿತ್ತು. ಆದರೂ ಚನ್ನಗಿರಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲು ಯತ್ನಿಸಿದ್ದಾರೆ. ಈ ವೇಳೆ ತುಮಕೂರಿನ ಕ್ಯಾತ್ಸಂದ್ರದ ಬಳಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಮಾಡಾಳು ವಿರೂಪಾಕ್ಷಪ್ಪ ಅವರು ಸಾಬೂನು ಹಾಗೂ ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದರು. ಅವರ ಪುತ್ರ ತಂದೆಯ ನಿಗಮದಲ್ಲಿ ಟೆಂಡರ್ ನೀಡಲು ಹಣ ಪಡೆಯುತ್ತಿದ್ದ ಎನ್ನಲಾಗುತ್ತಿದೆ. ಈ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು, ದಾಳಿ ನಡೆಸಿದಾಗ ಆರು ಕೋಟಿ ಹಣ ಸಿಕ್ಕಿತ್ತು. ಸದ್ಯ ಪ್ರಶಾಂತ್ ವಿರೂಪಾಕ್ಷಪ್ಪರನ್ನು ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

ಇದೇ ಕೇಸಲ್ಲಿ ಮಾಡಾಳು ವಿರೂಪಾಕ್ಷಪ್ಪ ಎ1 ಆರೋಪಿಯಾಗಿದ್ದರು. ಆದ್ರೆ ವಿಚಾರ ತಿಳಿದ ಬಳಿಕ ವಿರೂಪಾಕ್ಷಪ್ಪ ಎಸ್ಕೇಪ್ ಆಗಿದ್ದರು. ಬಳಿಕ ಜಾಮೀನು ಅರ್ಜಿಗೆ ಅಪ್ಲೈ ಮಾಡಿದ್ದರು. ಜಾಮೀನು ಸಿಕ್ಕ ಕೂಡಲೇ ಎಲ್ಲರ ಎದುರು ಮೆರವಣಿಗೆ ಮೂಲಕ ಬಂದಿದ್ದರು. ಇದೀಗ ಅದೇ ಕೇಸಲ್ಲಿ ಮತ್ತೆ ಅರೆಸ್ಟ್ ಆಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...