ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ನಡೆದ ಗಲಭೆಯ ಬಳಿಕ ಬಿಜೆಪಿ ನಾಯಕರೆಲ್ಲಾ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಕೊಂಡಿದ್ದಾರೆ. ಮದ್ದೂರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.
ಸಿಟಿ ರವಿ ಅವರು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಮುಸ್ಲಿಂ ಜನಾಂಗದ ಮೇಲೆ ದ್ವೇಷ ಉಂಟು ಮಾಡುವಂತಹ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿತ್ತು. ಇದೀಗ ಕಾಂಗ್ರೆಸ್ ಸರ್ಕಾರದ ಪರ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಭಾಷಣದಲ್ಲಿ ಶೇಕಡ 5 ಇದ್ದಾಗಲೇ ಬಾಲ ಬಿಚ್ಚುತ್ತಿದ್ದಾರೆ. ಇನ್ನೂ 50% ಆದಲ್ಲಿ ನಮ್ಮ ಮಕ್ಕಳು, ಮೊಮ್ಮಕ್ಕಳು ಬದುಕುವುದಕ್ಕೆ ಆಗುತ್ತಾ, ಸಮಾಜ ಒಡೆಯುತ್ತೊಡೆಯುತ್ತಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.
ಆರ್ ಅಶೋಕ್ ಈ ಸಂಬಂಧ ಮಾತನಾಡಿ, ಮದ್ದೂರಿನಲ್ಲಿ ನಿನ್ನೆ ನಾವು ದೊಡ್ಡ ಹೋರಾಟವನ್ನು ಮಾಡಿದ್ದೇವೆ. ನಾವೂ ಮದ್ದೂರಿಗೆ ಹೋಗಿದ್ದು ಬೆಂಬಲ ಕೊಡಲು ಹಾಗೂ ಗಾಯಗೊಂಡವರ ಮನೆಗೆ ಹೋದಾಗ ಅವರು ಹೇಳಿದ್ದು ಏನಂದ್ರೆ ಶವಯಾತ್ರೆ ವೇಳೆ ಮಸೀದಿ ಮುಂದೆ ತಮಟೆ ಹೊಡೆಯಬಾರದಂತೆ. ಆ ಮಸೀದಿಕಟ್ಟಿರುವುದು ಸರ್ಕಾರಿ ಜಾಗದಲ್ಲಿ. ಸಿಟಿ ರವಿ ಉದ್ರೇಕಕಾರಿ ಭಾಷಣ ಮಾಡಿಲ್ಲ. ಇದಕ್ಕಿಂತ ಕೆಟ್ಟದಾಗಿ ಕಾಂಗ್ರೆಸ್ ಅವರು ಬಹಳ ಸಲ ಮಾತನಾಡಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ ಏನು ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






