Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

---Advertisement---

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ ಶಾಲೆಗಳಲ್ಲಿ ಪ್ರತಿ ವರ್ಷವೂ ಶುಲ್ಕದ ದರ ಏರಿಕೆಯಾಗುತ್ತಲೇ ಇರುತ್ತದೆ. ಇದು ಪೋಷಕರ ನಿದ್ದೆ ಕೆಡಿಸುತ್ತದೆ. ಹೀಗಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಧು ಬಂಗಾರಪ್ಪ, ‘ಖಾಸಗಿ ಶಾಲೆಗಳುಗೆ ಒಂದು ಸಲಹೆ ನೀಡುತ್ತೇನೆ. ಕಾನೂನಿನ ಪ್ರಕಾರವೇ ಶಾಲೆಯಲ್ಲಿ ಫೀಸ್ ತೆಗೆದುಕೊಳ್ಳಬೇಕು. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಖಾಸಗಿ ಶಾಲೆಗಳು ಸಹಾಯ ಮಾಡಬೇಕು. ಅಕ್ರಮವಾಗಿ ಫೀಸ್ ತೆಗೆದುಕೊಂಡರೆ, ಹೆಚ್ಚಿನ ಶುಲ್ಕವನ್ನು ಪೋಷಕರಿಂದ ತೆಗೆದುಕೊಂಡರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದೇ ವೇಳೆ ಸರ್ಕಾರಿ ಶಾಲೆಗಳ ಬಗ್ಗೆ ಮಾತನಾಡಿ, ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ನಾನು ಗಮನಿಸಿದ್ದೇನೆ. ಸರ್ಕಾರಿ ಶಾಲೆಗಳ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಇದಕ್ಕೆಲ್ಲಾ ಸ್ವಲ್ಪ ಸಮಯ ಬೇಕಾಗುತ್ತದೆ. ಇದು ಪುಣ್ಯದ ಕೆಲಸ, ಹಂತ ಹಂತವಾಗಿ ಮಾಡುತ್ತೇನೆ ಎಂದಿದ್ದಾರೆ.

ಇದೇ ವೇಳೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಏಕೈಕ ವಿದ್ಯಾರ್ಥಿನಿ ಬಾಗಲಕೋಟೆಯ ಅಂಕಿತಾ ಶಿಕ್ಷಣದ ಬಗ್ಗೆಯೂ ಮಾತನಾಡಿದ್ದಾರೆ. ‘ಏನಾದರೂ ಸಹಾಯ ಬೇಕು ಎಂದರೆ ಕೇಳು ಎಂಬುದಾಗಿ ಅಂಕಿತಾಗೆ ಹೇಳಿದ್ದೇನೆ. ಸರ್ಕಾರದಿಂದ ಸಿಗುವ ಸೌಲಭ್ಯಗಳು ಆಕೆಗೆ ಸಿಗುತ್ತವೆ. ಉನ್ನತ ಶಿಕ್ಷಣಕ್ಕೆ ಬೇಕಾದರೆ ವೈಯಕ್ತಿಕವಾಗಿ ಸಹಾಯ ಮಾಡುತ್ತೇನೆ’ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment