Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಚನಗಳನ್ನು ಕಾಪಾಡಿಕೊಂಡು ಬಂದ ಕೀರ್ತಿ ಮಡಿವಾಳ ಮಾಚಿದೇವರಿಗೆ ಸಲ್ಲಬೇಕು : ಶಾಸಕ ಕೆ.ಸಿ.ವೀರೇಂದ್ರಪಪ್ಪಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.01 : ವಚನಗಳನ್ನು ಸಂರಕ್ಷಿಸಿದ ಮಡಿವಾಳ ಮಾಚಿದೇವರ ದಾರಿಯಲ್ಲಿ ಎಲ್ಲರೂ ಸಾಗಬೇಕಿದೆ ಎಂದು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಡಿವಾಳ ಮಾಚಿದೇವರ ಜಯಂತಿಯಲ್ಲಿ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಕಾಯಕ ಮಾಡುವುದು ಮಡಿವಾಳ ಮಾಚಿದೇವರ ವೃತ್ತಿಯಾಗಿತ್ತು. ಹನ್ನೆರಡನೆ ಶತಮಾನದ ಬಸವಣ್ಣನವರು ಅನುಭವ ಮಂಟಪದಲ್ಲಿ ಮಡಿವಾಳ ಮಾಚಿದೇವರಿಗೆ ವಿಶೇಷ ಸ್ಥಾನಮಾನ ಕೊಟ್ಟಿದ್ದರು. ವಚನಗಳನ್ನು ಕಾಪಾಡಿಕೊಂಡು ಬಂದ ಕೀರ್ತಿ ಮಡಿವಾಳ ಮಾಚಿದೇವರಿಗೆ ಸಲ್ಲಬೇಕು. ಹಿಂದಿನಿಂದಲೂ ನಮ್ಮ ಮನೆಯಲ್ಲಿ ಏನೆ ಕಾರ್ಯಕ್ರಮ ಜರುಗಿದರೂ ಮಡಿವಾಳರೂ ಬಂದೆ ಬರುತ್ತಾರೆ. ಆ ಪದ್ದತಿ ಮೊದಲಿನಿಂದಲೂ ನಡೆದುಕೊಂಡು ಬರುತ್ತಿದೆ ಎಂದು ಮಡಿವಾಳ ಜನಾಂಗಕ್ಕೂ ತಮಗೂ ಇರುವ ಅವಿನಾಭಾವ ಸಂಬಂಧವನ್ನು ನೆನಪಿಸಿಕೊಂಡರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ ಸಮಾಜದಲ್ಲಿ ಸಂಸ್ಕøತಿ, ಸಂಸ್ಕಾರ ವಿನಾಶದತ್ತ ಹೋಗುತ್ತಿರುವ ಇಂದಿನ ಕಾಲದಲ್ಲಿ ಮಡಿವಾಳ ಮಾಚಿದೇವ ಸೇರಿದಂತೆ ವಚನಕಾರರನ್ನು ನೆನಸಬೇಕಿದೆ. ಕ್ರಾಂತಿಕಾರಿ ಬಸವಣ್ಣನವರ ಆಶಯಗಳ ಮೇಲೆ ಸಂವಿಧಾನ ರಚನೆಯಾಗಿದೆ. ಸರ್ಕಾರ ಬಸವಣ್ಣನವರನ್ನು ಸಾಂಸ್ಕøತಿಕ ನಾಯಕ ಎಂದು ಘೋಷಿಸಿದೆ. ಸಮಾಜದ ಕೊಳೆಯನ್ನು ಶುಚಿ ಮಾಡಿ ಬದುಕುತ್ತಿರುವ ಮಡಿವಾಳ ಸಮಾಜ ಶಿಕ್ಷಣವಂತರಾಗಬೇಕು. ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಬೇಕಾಗಿರುವುದರಿಂದ ಈ ಜನಾಂಗ ಕಡ್ಡಾಯವಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಿ ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ಕರೆ ನೀಡಿದರು.

ಇತಿಹಾಸ ಸಂಶೋಧಕ ಡಾ.ಎಸ್.ಎನ್.ಮಹಾಂತೇಶ್ ಉಪನ್ಯಾಸ ನೀಡಿ ವಚನ ಸಾಹಿತ್ಯ ಉಳಿಸಿ ನಾಡಿಗೆ ಕೊಟ್ಟಂತ ಕೀರ್ತಿ ಮಡಿವಾಳ ಮಾಚಿದೇವಸ್ವಾಮಿಗೆ ಸಲ್ಲುತ್ತದೆ. ಯಾರಿಗೂ ಬಗ್ಗದ ಮಡಿವಾಳ ಮಾಚಿದೇವರು ತಮಗೆ ಕೊಟ್ಟ ಕೆಲಸವನ್ನು ನಿಷ್ಠೆಯಿಂದ ನಿಭಾಯಿಸುತ್ತಿದ್ದರು. ಬಸವಣ್ಣ, ಅಕ್ಕಮಹಾದೇವಿ ವಚನಗಳಲ್ಲಿ ಮಡಿವಾಳ ಮಾಚಯ್ಯನವರ ವ್ಯಕ್ತಿತ್ವ ಏನು ಎನ್ನುವುದು ಗೊತ್ತಾಗುತ್ತದೆ. ಸ್ವಾಭಿಮಾನದ ಸಂಕೇತವಾಗಿರುವ ಈ ಸಮಾಜ ಯಾರನ್ನು ಬೇಡಲಿಲ್ಲ. ಮಡಿವಾಳ ಜನಾಂಗಕ್ಕೆ ಬುದ್ದಿ ಬರಬೇಕಿದೆ. ಹಾಗಾಗಿ ತಿದ್ದಿ ತೀಡುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಮಡಿವಾಳ ಮಾಚಿದೇವರನ್ನು ಜನಾಂಗಕ್ಕಷ್ಟೆ ಸೀಮಿತಗೊಳಿಸಿಕೊಳ್ಳುವುದು ಸರಿಯಲ್ಲ. ಹೊಟ್ಟೆಕಿಚ್ಚು ಬಿಟ್ಟು ಮೊದಲು ಸಂಘಟಿತರಾಗಿ. ಬಸವಣ್ಣ, ಅಲ್ಲಮಪ್ರಭು, ಚನ್ನಬಸವಣ್ಣ, ಅಕ್ಕಮಹಾದೇವಿಯವರಲ್ಲಿ ಮಡಿವಾಳ ಮಾಚಿದೇವರು ಒಬ್ಬ ವಚನ ಸಂರಕ್ಷಕರು. ಬಸವಣ್ಣನವರ ವಿಚಾರಗಳಲ್ಲಿ ಮಾಚಯ್ಯನವರ ಪ್ರಸ್ತಾಪವಾಗಿದೆ. ವಚನ ಸಾಹಿತ್ಯ ಉಳಿಸುವ ಎದೆಗಾರಿಕೆ, ತಾಕತ್ತು ಇದ್ದುದರಿಂದಲೇ ಬಸವಣ್ಣನವರು ಮಾಚಯ್ಯನನ್ನು ಕಲ್ಯಾಣಕ್ಕೆ ಕರೆಸಿಕೊಂಡು ಅನುಭವ ಮಂಟಪ ರಕ್ಷಿಸುವ ಕೆಲಸ ನೀಡುತ್ತಾರೆ. ಆಂಧ್ರ, ಮಹಾರಾಷ್ಟ್ರ, ತಮಿಳುನಾಡು, ಕೇಳದಲ್ಲೂ ಮಡಿವಾಳ ಮಾಚಿದೇವರ ವಿಚಾರಗಳಿವೆ ಎಂದು ನುಡಿದರು.

ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಬಿ.ರಾಮಜ್ಜ ಮಾತನಾಡಿ ಮಡಿವಾಳ ಮಾಚಿದೇವರು ಸಂರಕ್ಷಿಸಿರುವ ವಚನಗಳು ಸಮಾಜಕ್ಕೆ ಇಂದಿಗೂ ಪ್ರಸ್ತುತವಾಗಿದೆ. ಶುಚಿಗೊಳಿಸುವ ಕಾಯಕದಿಂದ ಹೆಸರುವಾಸಿಯಾಗಿರುವ ಮಡಿವಾಳ ಜನಾಂಗ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದದಲ್ಲಿ ನಡೆಯಬೇಕು ಎಂದು ತಿಳಿಸಿದರು.

ಮಡಿವಾಳ ಸಮಾಜದ ಕಾರ್ಯದರ್ಶಿ ಕೆ.ಆರ್.ಮಂಜುನಾಥ್, ಉಪವಿಭಾಗಾಧಿಕಾರಿ ಕಾರ್ತಿಕ್, ನಗರಸಭೆ ಪೌರಾಯುಕ್ತರಾದ ರೇಣುಕ, ಮಡಿವಾಳ ಸಮಾಜದ ಪ್ರಕಾಶ್, ರುದ್ರಮುನಿ, ರಂಗಪ್ಪ, ರಮೇಶ್, ಶಿವಲಿಂಗಪ್ಪ, ಮಂಜುನಾಥ್, ರಂಗಮ್ಮ, ವೀಣ, ಲಕ್ಷ್ಮಣ, ವಿನೋದಮ್ಮ, ಗೋಪಾಲಪ್ಪ, ಲಕ್ಷ್ಮಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಇನ್ನು ಮುಂತಾದವರು ಮಡಿವಾಳ ಮಾಚಿದೇವ ಜಯಂತಿಯಲ್ಲಿ ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...