ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸದ್ಯ ಈಗ ಎಲ್ಲೆಡೆ ಮದ್ರಾಸ್ ಐ ಸಮಸ್ಯೆಯೇ ಕಾಡುತ್ತಿದೆ. ಅದರಲ್ಲೂ ಮಕ್ಕಳನ್ನೇ ಟಾರ್ಗೆಟ್ ಮಾಡ್ತಾ ಇದೆ. ಕಣ್ಣಿನಲ್ಲಿ ಸಾಮಾನ್ಯವಾಗಿ ಕಣ್ಣು ಕೆಂಪಾಗಿ, ಬಿಳಿ ಪದರಗಳು ಕಾಣಿಸಿಕೊಂಡು, ತುರಿಕೆಯೊಂದಿಗೆ ನೀರು ಸುರಿಯುವುದನ್ನು ಮದ್ರಾಸ್ ಐ ಆಗಿದೆ ಎಂಬುದನ್ನು ಸೂಚಿಸುತ್ತಿದೆ. ಮಿಂಟೋ ಆಸ್ಪತ್ರೆಗೆ ಪ್ರತಿನಿತ್ಯ 400 ರಿಂದ 600 ಹೊರರೋಗಿಗಳು ಭೇಟಿ ನೀಡುತ್ತಿದ್ದಾರೆ. ಇದರಲ್ಲಿ 90 ರಿಂದ 100 ರೋಗಿಗಳಲ್ಲಿ ಈ ಸಮಸ್ಯೆ ದೃಢವಾಗಿದೆ. ಇನ್ನು ನಾರಾಯಣ ನೇತ್ರಾಲಯದಲ್ಲಿ ಪ್ರತಿನಿತ್ಯ ಸರಾಸರಿ 20 ಪ್ರಕರಣಗಳು ವರದಿಯಾಗುತ್ತಿದೆ. ಹೀಗಾಗಿ, ಜನ ಈ ಬಗ್ಗೆ ಹೆಚ್ಚಿನ ನಿಗಾವಹಿಸಬೇಕಿದೆ.
ಮದ್ರಾಸ್ ಐ ಬ್ಯಾಕ್ಟೀರಿಯಾ ಅಥವಾ ವೈರಸ್ನಿಂದ ಉಂಟಾಗುತ್ತದೆ. ಇದು ಕಂಡು ಬಂದರೆ ಮುಂದೆ ಇರುವವರಿಗೂ ಬಹಳ ವೇಗವಾಗಿ ಹರಡುತ್ತದೆ. ಇದು ಕಣ್ಣಿನಿಂದ ಮೂಲಕ ಹರಡುತ್ತದೆ. ಈ ವೈರಸ್ ಸಂಪರ್ಕಕ್ಕೆ ಬರುವ ಇನ್ನೊಬ್ಬ ವ್ಯಕ್ತಿ ಬೇಗ ಹರಡುವಂತ ಸಾಂಕ್ರಾಮಿಕ ವೈರಸ್ ಆಗಿದೆ.
ಆದಷ್ಟು ಇದರಿಂದ ಮುಕ್ತವಾಗುವುದಕ್ಕೆ ಸ್ವಚ್ಚತೆ ತುಂಬಾ ಮುಖ್ಯವಾಗುತ್ತದೆ. ನಿಮ್ಮ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಆಗಾಗ್ಗೆ ತೊಳೆಯಿರಿ, ನಿಮ್ಮ ಕಣ್ಣುಗಳನ್ನು ಸ್ಪರ್ಶಿಸಿದ ನಂತರ, ಕಾಂಜಂಕ್ಟಿವಿಟಿಸ್ ಹೊಂದಿರುವ ಯಾರೊಂದಿಗಾದರೂ ಸಂಪರ್ಕಕ್ಕೆ ಬಂದ ನಂತರ ಕೈ ಸ್ವಚ್ಛವಾಗಿರಲಿ. ಜೊತೆಗೆ ನಿಮ್ಮ ಕಣ್ಣುಗಳನ್ನು ಉಜ್ಜಲು ಪ್ರಯತ್ನಿಸಬೇಡಿ. ಏಕೆಂದರೆ ಇದು ನಿಮ್ಮ ಕೈಗಳಿಂದ ಸೂಕ್ಷ್ಮಜೀವಿಗಳನ್ನು ನಿಮ್ಮ ಕಣ್ಣುಗಳಿಗೆ ವರ್ಗಾಯಿಸುತ್ತದೆ ಮತ್ತು ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್