Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

Maha Kumbh 2025: ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ : ಗಮನಸೆಳೆಯುತ್ತಿರುವ ಬಾಬಾಗಳು

---Advertisement---

ಸುದ್ದಿಒನ್ : ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಘೋರಿಗಳು ಅಲ್ಲಿನ ಬೀದಿಗಳಲ್ಲಿ ಕುಣಿದು ಕುಪ್ಪಳಿಸುವ ಮೂಲಕ ಭಕ್ತರನ್ನು ಉತ್ತೇಜಿಸುತ್ತಿದ್ದಾರೆ.

ಇನ್ನೊಂದೆಡೆ ಕುಂಭಮೇಳಕ್ಕೆ ವಿವಿಧ ಬಾಬಾಗಳು ಬರುತ್ತಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಇಲ್ಲಿ ಕಾಣಸಿಗುವ ರುದ್ರಾಕ್ಷ ಬಾಬಾ ವಿಶೇಷ. 11 ಸಾವಿರ ರುದ್ರಾಕ್ಷಗಳಿಂದ ಅವರ ಅಲಂಕಾರ ಎಲ್ಲರ ಗಮನ ಸೆಳೆಯುತ್ತಿದೆ. 30 ಕೆಜಿ ತೂಕದ ಈ ಆಭರಣದೊಂದಿಗೆ ರುದ್ರಾಕ್ಷ ಬಾಬಾ ಕಾಣಿಸಿಕೊಳ್ಳುತ್ತಿದ್ದಾನೆ. ಇವರಿಂದ ರುದ್ರಾಕ್ಷ ಪಡೆದರೆ ಎಲ್ಲವೂ ಸರಿ ಹೋಗುತ್ತದೆ ಎಂಬುದು ಭಕ್ತರ ನಂಬಿಕೆ.

ಪರಿಸರ ಬಾಬಾ ಕೂಡ ಗಮನ ಸೆಳೆಯುತ್ತಿದ್ದಾರೆ. ಅವರು ಪೂರ್ಣ ಅಲಂಕಾರಗಳೊಂದಿಗೆ ಕೈಯಲ್ಲಿ ಸರ್ಪದಂಡದೊಂದಿಗೆ ಕಾಣಿಸಿಕೊಂಡಿದ್ದಾರೆ. ಈ ಬಾಬಾ ಚಿನ್ನದ ಕನ್ನಡಕ ಮತ್ತು ಕೊರಳಲ್ಲಿ ಚಿನ್ನದ ರುದ್ರಾಕ್ಷಿಗಳೊಂದಿಗೆ ಬೆರಗುಗೊಳಿಸಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ವಿಶೇಷ ಟೆಂಟ್‌ ಹಾಕಿಕೊಂಡು ಭಕ್ತರಿಗೆ ಆಶೀರ್ವಾದ ಮಾಡುತ್ತಿದ್ದಾರೆ. ಪರಿಸರ ಸಂರಕ್ಷಣೆಯ ಅಭಿಯಾನವನ್ನೂ ಮಾಡುತ್ತಿದ್ದಾರೆ. ಪರಿಸರ ಬಾಬಾ ಅವರು ಹಲವಾರು ದಶಕಗಳಿಂದ ಈ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳುತ್ತಾರೆ.

ಅಂಬಾಸಿಡರ್ ಬಾಬಾ ಕೂಡ 1972 ರ ಮಾಡೆಲ್ ಅಂಬಾಸಿಡರ್ ಕಾರಿನಲ್ಲಿ ಪ್ರಯಾಗರಾಜ್ ತಲುಪಿದ್ದಾರೆ. ಅವರ ಅಂಬಾಸಿಡರ್ ಕಾರು ಭಕ್ತರನ್ನು ಸೆಳೆಯುತ್ತಿದೆ. 35 ವರ್ಷಗಳಿಂದ ಇದೇ ಅಂಬಾಸಿಡರ್ ಕಾರನ್ನು ಬಳಸುತ್ತಿದ್ದೇನೆ ಎನ್ನುತ್ತಾರೆ ಬಾಬಾ. ಇದು ಅವರ ವಾಹನ ಇದು ಅವರ ಮನೆ ಎನ್ನುತ್ತಾರೆ. ಇಂದೋರ್‌ನಿಂದ ಪ್ರಯಾಗ್‌ರಾಜ್‌ಗೆ ತಲುಪಲು 36 ಗಂಟೆ ತೆಗೆದುಕೊಂಡರೂ ಯಾವುದೇ ಪ್ರಯಾಸವಾಗಲಿಲ್ಲ ಎಂದು ಅವರು ಹೇಳುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...