Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಾ ಶಿವರಾತ್ರಿ ಸಪ್ತಾಹ : ಗೋಪೂಜೆ ಮೂಲಕ ಚಾಲನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ.20 :
ಚಿತ್ರದುರ್ಗ ನಗರದ ಕಬೀರಾನಂದ ನಗರದಲ್ಲಿನ ಶ್ರೀ ಕಬೀರಾನಂದಾಶ್ರಮದವತಿಯಿಂದ ಫೆ. 22 ರಿಂದ 27ರವರೆಗೆ ನಡೆಯುವ 95ನೇ ಮಹಾ ಶಿವರಾತ್ರಿ ಮಹೋತ್ಸವದ ಅಂಗವಾಗಿ ಫೆ 20 ರ ಇಂದು ಬೆಳಿಗ್ಗೆ ಕಾತ್ರಾಳ್ ಬಳಿಯಿರುವ ಗೋಶಾಲೆಯಲ್ಲಿ ಗೋಪೂಜೆಯನ್ನು ಮಾಡುವುದರ ಮೂಲಕ ಶ್ರೀ ಸದ್ಗುರು ಕಬೀರಾನಂದಾಶ್ರಮದ ಪೀಠಾಧ್ಯಕ್ಷರಾದ ಸದ್ಗುರು ಶ್ರೀ ಶಿವಲಿಂಗಾನಂದ ಮಹಾಸ್ವಾಮಿಗಳವರ ಚಾಲನೆಯನ್ನು ನೀಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಸಹಾ ಶ್ರೀಗಳು ಮಹಾ ಶಿವರಾತ್ರಿ ಸಪ್ತಾಹದ ಪ್ರಾರಂಭದ ದಿನದಂದು ಗೋ ಪೂಜೆಯನ್ನು ನಡೆಸುವುದು ಪದ್ದತಿಯಾಗಿದೆ ಈ ಹಿನ್ನಲೆಯಲ್ಲಿ ಇಂದು ಗೋ ಪೂಜೆಯನ್ನು ನಡೆಸಿದರು. ಫೆ. 22 ರಿಂದ ನಡೆಯುವ ಮಹಾ ಶಿವರಾತ್ರಿ ಮಹೋತ್ಸವವು ಯಾವ ರೀತಿಯ ತಡೆಯಿಲ್ಲ ನಿರಾಸವಾಗಿ ನಡೆಯುವಂತೆ ಮಾಡಲು ಗೋಮಾತೆಯಲ್ಲಿ ಮನವಿ ಮಾಡಲಾಯಿತು.

ಗೋವುಗಳನ್ನು ರಕ್ಷಣೆ ಮಾಡುವುದಕ್ಕಾಗಿಯೇ ಇಲ್ಲಿಗೆ ಆಗಮಿಸಿದ ಸಿದ್ದಾರೂಢರು ಗೋಸಂಪತ್ತನ್ನು ರಕ್ಷಿಸುವುದರ ಮೂಲಕ ನಮ್ಮ ಮಾತೆಯನ್ನು ರಕ್ಷಣೆ ಮಾಡಬೇಕಿದೆ ನಮ್ಮ ಹಿಂದು ಶಾಸ್ತ್ರದ ಪ್ರಕಾರ ಗೋವಿನಲ್ಲಿ 33 ಕೋಟಿ ದೇವತೆಗಳು ಇದ್ದಾರೆ ಎಂಬ ನಂಬಿಕೆ ಇದೆ ಇದರಿಂದ ಗೋವನ್ನು ಶೂಭ ಕಾರ್ಯವನ್ನು ಪ್ರಾರಂಭ ಮಾಡುವ ಮುಂಚೆ ಸದಾ ಪೂಜೆ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ 95ನೇ ಮಹಾ ಶಿವರಾತ್ರಿ ಮಹೋತ್ಸವದ ಪ್ರಧಾನ ಕಾರ್ಯದರ್ಶಿಗಳಾದ ಬದರಿನಾಥ್, ಕಭೀರಾನಂದಾಶ್ರಮದ ಕಾರ್ಯದರ್ಶಿಗಳಾದ ವಿ.ಎಲ್.ಪ್ರಶಾಂತ್, ವಿಎಚ್.ಪಿ.ಯ ರುದ್ರೇಶ್,ಸದಸ್ಯರಾದ ಓಂಕಾರ್, ಉತ್ಸವ ಸಮಿತಿ ಸದಸ್ಯರಾದ ಸತೀಶ್, ನಾಗರಾಜ್ ಸಂಗಂ, ಕಿರಣ ಕುಮಾರ್, ಭಾನು ಮೂರ್ತಿ, ಪುಟ್ಟಣ್ಣ, ಗಣಪತಿ ಶಾಸ್ತ್ರಿ, ತಿಪ್ಪೇಸ್ವಾಮಿ ನಿರಂಜನ ಮೂರ್ತಿ, ಯೋಗಿಶ್, ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...