Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಧ್ರುವನಾರಾಯಣ್ ಮಗನಿಗೆ ಕ್ಷೇತ್ರ ಬಿಟ್ಟುಕೊಟ್ಟ ಮಹದೇವಪ್ಪ : ಬೆಂಬಲಿಗರಿಗೆ ಫುಲ್ ಖುಷಿ..!

---Advertisement---

ಚಾಮರಾಜನಗರ: ಧ್ರುವನಾರಾಯಣ್ ಬದುಕಿದ್ದಾಗ ನಂಜನಗೂಡು ಕ್ಷೇತ್ರದ ಟಿಕೆಟ್ ಗಾಗಿ ಅರ್ಜಿ ಹಾಕಿದ್ದರು. ಜೊತೆಗೆ ಈ ಬಾರಿ ಮಗನಿಗೂ ಟಿಕೆಟ್ ಬೇಕು ಅಂತಾನೇ ಕೇಳಿದ್ದರು. ಆದ್ರೆ ಎಲೆಕ್ಷನ್ ಗೂ ಮುನ್ನವೇ ಹೇಳದೆ ಕೇಳದೆ ಬಾರದೂರಿಗೆ ಹೊರಟೇ ಹೋದರೂ. ಅಂತ ವ್ಯಕ್ತಿಯನ್ನ ಕಳೆದುಕೊಂಡ ಕಾರ್ಯಕರ್ತರಿಗೆ ಇನ್ನಿಲ್ಲದ ನೋವು. ಹೀಗಾಗಿ ಅವರ ಆಸೆಯಂತೆ ಮಗನಿಗೆ ಟಿಕೆಟ್ ನೀಡಿ ಎಂದು ಪಕ್ಷದ ಬಳಿ, ಕ್ಷೇತ್ರ ಬಿಟ್ಟುಕೊಡಿ ಎಂದು ಹೆಚ್ ಸಿ ಮಹದೇವಪ್ಪ ಬಳಿ ಮನವಿ ಮಾಡಿದ್ದರು.

ಇದೀಗ ಕಾರ್ಯಕರ್ತರ ಆಸೆಯಂತೆ ಮಹದೇವಪ್ಪ ಅವರು ಕ್ಷೇತ್ರ ಬಿಟ್ಟುಕೊಡಲು ಒಪ್ಪಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನೀನು ಬೇರೆಯಲ್ಲ, ನನ್ನ ಮಗ ಬೇರೆಯಲ್ಲ. ನಿನ್ನ ಕುಟುಂಬಕ್ಕೆ ಬೇಕಾದ ಎಲ್ಲಾ ರೀತಿಯ ನೆರವು ನೀಡುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ. ಇಂದು ಧ್ರುವನಾರಾಯಣ್ ಅವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಲ್ಲದೆ ಕ್ಷೇತ್ರ ಬಿಟ್ಟು ಕೊಡುವ ಬಗ್ಗೆಯೂ ಮಾತನಾಡಿದ್ದಾರೆ.

ಧ್ರುವನಾರಾಯಣ್ ಅವರ ಮಗ ದರ್ಶನ್ ಗೆ ನಾನು ಬೆಂಬಲ ನೀಡುತ್ತೇನೆ. ಹೀಗಾಗಿ ನಂಜನಗೂಡ ಕ್ಷೇತ್ರದಿಂದ ಹಿಂದೆ ಸರಿಯುತ್ತಿದ್ದೇನೆ. ಧ್ರುವನಾರಾಯಣ್ ಹಠಾತ್ ನಿಧನರಾದಾಗಲೇ ನಾನು ಈ ನಿರ್ಧಾರ ಮಾಡಿದ್ದೆ. ದರ್ಶನ್ ಗೆಲುವಿಗೆ ಓಡಾಡುತ್ತೇನೆ. ಈ ಸಂದರ್ಭದಲ್ಲಿ ನಾನು ನಂಜನಗೂಡು ಅಭ್ಯರ್ಥಿಯಾಗಲೂ ಬಯಸುವುದಿಲ್ಲ. ಇದನ್ನು ನನ್ನ ಮಗ ಸುನೀಲ್ ಬೋಸ್ ಹಾಗೂ ದರ್ಶನ್ ಧ್ರುವನಾರಾಯಣ್ ಮುಂದೆ ಬಹಿರಂಗ ಪಡಿಸುತ್ತಿದ್ದೇನೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...