ಕೆ.ಎಲ್.ರಾಹುಲ್ ಮನೆಗೆ ಮಹಾಲಕ್ಷ್ಮಿ ಆಗಮನ ; ದಂಪತಿಗೆ ಹೆಣ್ಣು ಮಗು

ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ ಮನೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆಗೆ ಮಹಾಲಕ್ಷ್ಮಿಯ ಆಗಮನವಾಗಿದೆ. ಕೆ.ಎಲ್.ರಾಹುಲ್ ಹಾಗೂ ನಟಿ ಆಥಿಯಾ ಶೆಟ್ಟಿ ಮೊದಲ ಮಗುವನ್ನ ಬರ ಮಾಡಿಕೊಂಡಿದ್ದಾರೆ. ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಈ ಖುಷಿಯನ್ನ ಕ್ರಿಕೆಟಿಗ ಕೆ.ಎಲ್.ರಾಹುಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೆಣ್ಣು ಮಗು ಜನಿಸಿದೆ ಎಂದು ಟ್ವೀಟ್ ಮಾಡಿದ ಕೂಡಲೇ ರಿಟ್ವೀಟ್ ಗಳು ಹೆಚ್ಚಾಗಿ ಬಂದಿವೆ. ಆಪ್ತರು, ಸಂಬಂಧಿಕರು, ನಟ, ನಟಿಯರು ಶುಭಕೋರುತ್ತಿದ್ದಾರೆ. ಸದ್ಯ ತಾಯಿ, ಮಗು ಆರೋಗ್ಯದಿಂದ ಇದ್ದು, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ಸುನೀತ್ ಶೆಟ್ಟಿ ತಾತನಾಗಿ ಬಡ್ತಿ ಪಡೆದಿದ್ದಹ, ಮನೆಗೆ ಮೊಮ್ಮಗು ಬಂದ ಸಂತಸ ಇಡೀ ಕುಟುಂಬದಲ್ಲಿ ಮನೆ ಮಾಡಿದೆ. ಎಲ್ಲರೂ ತಾಯಿ ಮಗುವಿಗೆ ಶುಭ ಹಾರೈಸಿದ್ದಾರೆ.

ಆಥಿಯಾ ಹಾಗೂ ಕೆ.ಎಲ್.ರಾಹುಲ್ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಬಿದ್ದಿದ್ದರು. ಈ ಬಗ್ಗೆ ಸಾಕಷ್ಟು ಸಲ ಕೇಳಿದಾಗಲೂ ಹೌದು ಎಂಬ ಮಾತನ್ನ ಹೇಳಿರಲಿಲ್ಲ. ಹಾಗೇ ಸುನೀಲ್ ಶೆಟ್ಟಿ ಅವರಿಗೂ ಈ ಬಗ್ಗೆ ಸಾಕಷ್ಟು ಬಾರಿ ಪ್ರಶ್ನೆ ಎದುರಾಗಿತ್ತು. ಮಗಳ ಪ್ರೀತಿ ಬಗ್ಗೆ ಸುನಿಲ್ ಶೆಟ್ಟಿ ಕೂಡ ನೇರವಾಗಿ ಯಾವುದನ್ನು ಹೇಳಿರಲಿಲ್ಲ. 2023ರ ಜನವರಿ 23ರಂದು ಮದುವೆಯ ಮುದ್ರೆ ಒತ್ತುವ ಮೂಲಕ ಪ್ರೀತಿಯ ಹಕ್ಕಿಗಳು ಸಂಸಾರ ಶುರು ಮಾಡಿದ್ದರು. ಗುರು ಹಿರಿಯರ ಆಶೀರ್ವಾದದೊಂದಿಗೆ ಮದುವೆಯಾಗಿದ್ದ ಜೋಡಿ, ಇದೀಗ ಪುಟ್ಟ ಕಂದನನ್ನ ಸ್ವಾಗತಿಸಿದೆ. ಕೆ.ಎಲ್.ರಾಹುಲ್ ಡೆಲ್ಲಿ ಕ್ಯಾಪಿಟಲ್ ಪರ ಆಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಈ ಶುಭ ಸುದ್ದಿ ಮತ್ತಷ್ಟು ಸಂತಸವನ್ನ ಹೆಚ್ಚಿಸಿದೆ.

suddionenews

Recent Posts

ಯುರಿನ್ ಇನ್ಫೆಕ್ಷನ್ ಆಗಿದ್ಯಾ..? ಈ ಮನೆ ಮದ್ದನ್ನ ಟ್ರೈ ಮಾಡಿ

ಸಾಮಾನ್ಯವಾಗಿ ಸಾಕಷ್ಟು ಜನರಿಗೆ ಯುರಿನ್ ಇನ್ಫೆಕ್ಷನ್ ಸಮಸ್ಯೆ ಕಾಡುತ್ತದೆ. ಪಬ್ಲಿಕ್ ಟಾಯ್ಲೆಟ್ ಬಳಸಿದಾಗ ಅಥವಾ ಸ್ವಚ್ಚತೆ ಇಲ್ಲದ ವಾಶ್ ರೂಮ್…

2 hours ago

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ, ಗುರುವಾರದ ರಾಶಿ ಭವಿಷ್ಯ 27 ಮಾರ್ಚ್ 2025…

4 hours ago

ನಾಳೆಯಿಂದ ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೊಳಲ್ಕೆರೆ ಸಜ್ಜು

ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 26 : ಗಣಪತಿಯ ಧಾರ್ಮಿಕ ಸ್ಥಳವಾದ ಹೊಳಲ್ಕೆರೆಯಲ್ಲಿ ನಾಳೆಯಿಂದ ( ಗುರುವಾರ) ಎರಡು ದಿನಗಳ ಕಾಲ…

11 hours ago

ನಾಳೆ ಮಾನವ ಹಕ್ಕು ಆಯೋಗದ ಅಧ್ಯಕ್ಷರ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ವಿಚಾರಣೆ

    ಚಿತ್ರದುರ್ಗ. ಮಾರ್ಚ್26 :  ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ…

11 hours ago

ನಾಗರಾಜ್ ಅವರಿಗೆ ಸಮಾಜ ಸೇವಾ ರತ್ನ ಮತ್ತು ಬಡವರ ಆಶಾಕಿರಣ ಪ್ರಶಸ್ತಿ ಪ್ರದಾನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

11 hours ago

6 ವರ್ಷಗಳ ಕಾಲ ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ..!

  ಸುದ್ದಿಒನ್, ಬೆಂಗಳೂರು, ಮಾರ್ಚ್. 26 :  ಬಿಜೆಪಿಯ ಶಿಸ್ತು ಸಮಿತಿ ಸಾಕಷ್ಟು ಬಾರೀ ಎಚ್ಚರಿಕೆಯನ್ನು ನೀಡಿದರು ಸಹ ಎಚ್ಚೆತ್ತುಕೊಳ್ಳದೆ…

14 hours ago