Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಳ್ಳೆಕೆರನಹಳ್ಳಿಯಲ್ಲಿ ಅತಿಕ್ರಮವಾಗಿ ಗುಡಿಸಲುಗಳ ನಿರ್ಮಿಸಿರುವವರ ವಿರುದ್ದ ಕಾನೂನು ಕ್ರಮಕ್ಕೆ ಮಹಾನಾಯಕ ದಲಿತ ಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.05 : ಪಿಳ್ಳೆಕೆರನಹಳ್ಳಿಯಲ್ಲಿರುವ ರಿ.ಸ.ನಂ. 38/1 ರ ಜಂಟಿ ಖಾತೆಯಿರುವ ದಲಿತರ ಖಾಸಗಿ ಜಮೀನಿನಲ್ಲಿ ಮೇಲ್ಜಾತಿಯವರ ಕುಮ್ಮಕ್ಕಿನಿಂದ ಕೆಲವರು ಅತಿಕ್ರಮವಾಗಿ ಪ್ರವೇಶಿಸಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿರುವುದನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಮಹಾನಾಯಕ ದಲಿತ ಸೇನೆ ವತಿಯಿಂದ ಕಳೆದ ಎಂಟು ದಿನಗಳಿಂದ ನಡೆಯುತ್ತಿದ್ದ ಧರಣಿ ಶುಕ್ರವಾರ ಅಂತ್ಯಗೊಂಡಿತು.

ಗೋನೂರು ಗ್ರಾಮದ ವಾಸಿಗಳಾದ ಓಬಯ್ಯ, ಪಾಪಣ್ಣ, ನೀಲಮ್ಮ, ಚಂದ್ರಣ್ಣ, ಮಂಜುನಾಥ, ಗೋಪಾಲ ಇವರ ಹೆಸರುಗಳಿಗೆ ಖಾತೆಯಿರುವ ನಾಲ್ಕು ಎಕರೆ 28 ಗುಂಟೆ ಜಮೀನಿನಲ್ಲಿ ಕೆಲವರು ಗುಂಪುಕಟ್ಟಿಕೊಂಡು ಬಂದು ರಾತ್ರೋರಾತ್ರಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದಾರೆ. ಕೇಳಲು ಹೋದ ಜಮೀನಿನ ಮಾಲೀಕರ ಮೇಲೆ ಜಾತಿ ನಿಂದಿಸಿ ದೌರ್ಜನ್ಯವೆಸಗಿರುತ್ತಾರೆ.

ಈ ಸಂಬಂಧ ಬಡಾವಣೆ ಠಾಣೆಗೆ ದೂರು ನೀಡಲಾಗಿದ್ದು, ತಹಶೀಲ್ದಾರ್ ಹಾಗೂ ಡಿ.ವೈ.ಎಸ್ಪಿ.ರವರ ಗಮನಕ್ಕೂ ತರಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳನ್ನು ಸೇವೆಯಿಂದ ಅಮಾನತ್ತುಗೊಳಿಸುವಂತೆ ಕಂದಾಯ ಸಚಿವರು ಹಾಗೂ ಗೃಹ ಸಚಿವರಿಗೆ ಮನವಿ ಮಾಡಲಾಗಿದೆ. ಹಾಗಾಗಿ ಅತಿಕ್ರಮಣ ಮಾಡಿರುವವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಂಡು ದಲಿತರಿಗೆ ಜಮೀನು ಬಿಡಿಸಿಕೊಡಬೇಕೆಂದು ಮಹಾನಾಯಕ ದಲಿತ ಸೇನೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮಹಾನಾಯಕ ದಲಿತ ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ಎ.ತಾಳಿಕೆರೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಹೊಳೆಯಪ್ಪ ಕೆ. ಸಾಕ್ಯ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರದೀಪ್
ಕಾರ್ಯದರ್ಶಿ ಪೆನ್ನೇಶ್ ಕೆ. ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment