ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಹಾರಾಷ್ಟ್ರ ರಾಜಕೀಯದಲ್ಲಿ ಮಿಂಚಿನ ಸಂಚಲನ ಸೃಷ್ಟಿಯಾಗಿದೆ. ಎನ್ಸಿಪಿ ಪಕ್ಷದ ರಾಜ್ಯ ಘಟಕ ಅಧ್ಯಕ್ಷ ಸ್ಥಾನ ನಿರಾಕರಣೆ ಬಳಿಕ ಬಂಡಾಯವೆದ್ದ ಅಜಿತ್ ಪವಾರ್ ಅವರು ಸಭೆ ನಡೆಸಿದ್ದರು. ಇದರ ಬೆನ್ನಲ್ಲೆ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಯಾಣ ವಚನ ಸ್ವೀಕರಿಸಿದ್ದಾರೆ.
ಡಬಲ್ ಇಂಜಿನ್ ಸರ್ಕಾರಕ್ಕೆ ಮತ್ತೊಂದು ಇಂಜಿನ್ ಸೇರಿದೆ. ಇದು ತ್ರಿಬಲ್ ಇಂಜಿನ್ ಸರ್ಕಾರ. ನಮ್ಮ ಸರ್ಕಾರ ಬುಲೆಟ್ ಟ್ರೈನ್ ಅಂತ ಕೆಲಸ ಮಾಡಲಿದೆ. ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಅಜಿತ್ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿದ್ದಾರೆ.
ಬಂಡಾಯವೆದ್ದಿದ್ದ ಅಜಿತ್ ಪವಾರ್ ಅವರು, ಭಾನುವಾರ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಕೆಲವು ನಾಯಕರು ಜೊತೆ ಸಭೆ ನಡೆಸಿದ್ದರು. ಅದರ ಬೆನ್ನಲ್ಲೆ ರಾಜ್ಯಪಾಲ ರಮೇಶ್ ಪೈಸ್ ಅವರ ಸಮ್ಮುಖದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಮೇಶ್ ಪೈಸ್ ಪ್ರತಿಜ್ಞಾ ವಿಧಿ ಬೋಧಿಸಿದರು. ಎನ್ಸಿಪಿ ಬಿಟ್ಟ ನಾಯಕ ಅಜಿತ್ ಪವಾರ್ ಜೊತೆ 29 ಶಾಸಕರ ಬೆಂಬಲ ಹೊಂದಿದ್ದಾರೆ. ಅದರಲ್ಲಿ ಎಂಟು ಏಕನಾಥ್ ಶಿಂಧೆ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಅಜಿತ್ ನಡೆಗೆ ಶರತ್ ಪವಾರ್ ಕೆಂಡಮಂಡಲ ಆಗಿದ್ದಾರೆ. ಇದು ಆಪರೇಷನ್ ಕಮಲ. ಮಹಾರಾಷ್ಟ್ರದಲ್ಲಿ ರಾಜಕಾರಣ ಮೌಲ್ಯ ಅದಃಪತನವಾಗಿದೆ. ಮಹಾರಾಷ್ಟ್ರ ಜನತೆ ಎನ್ ಸಿಪಿ ಜೊತೆಗೆ ಇದ್ದಾರೆ ಎಂದು ಶರತ್ ಪವಾರ್ ಹೇಳಿಕೆ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್