Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಾತ್ಮ ಗಾಂಧಿಜೀ ಬರೀ ಭಾರತಕ್ಕೆ ನಾಯಕ ಅಲ್ಲ ವಿಶ್ವದ ನಾಯಕ : ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು : ಮಹಾತ್ಮ ಗಾಂಧಿಜೀ ಬರೀ ಭಾರತಕ್ಕೆ ನಾಯಕ ಅಲ್ಲ, ವಿಶ್ವದ ನಾಯಕ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಇಳಿಯುವ ಮೊದಲು ಭಾರತವನ್ನ ಸುತ್ತಿದ್ರು. ಜನರ ಸಾಮಾಜಿಕ ಮತ್ತು ಆರ್ಥಿಕ ಜೀವನ ಬಗ್ಗೆ ತಿಳಿಯಲು ದೇಶ ಸುತ್ತಿದ್ರು.

ನನ್ನ ಜನ ಬಡತನದಲ್ಲಿ ಇದ್ದಾರೆ ಹೀಗಾಗಿ ಅವರಿಗೆ ಊಟ ಬಟ್ಟೆ ಸಿಗುವವರೆಗೂ ನಾನು ಅರೆಬಟ್ಟೆ ಧರಿಸುತ್ತೇನೆಂದು ತೀರ್ಮಾನ ಮಾಡಿದ್ರು.

ನುಡಿದಂತೆ ನಡೆದ ಮಹಾನುಭಾವ ಮಹಾತ್ಮ ಗಾಂಧಿಜೀ ಅವರು ಏನು ಹೇಳಿದ್ರೋ ಅದರಂತೆ ನಡೆದುಕೊಂಡ್ರು. ನೆಲ್ಸನ್ ಮಂಡೇಲಾ, ಮಾರ್ಟಿನ್‌ ಲೂಥರ್‌ ,ಓಬಮಾ ಸಹ ಮಹಾತ್ಮ ಗಾಂಧಿ ತತ್ವಗಳ ಮೇಲೆ ನಡೆದರು. ಮೋದಿ ಬರೀ ಸುಳ್ಳು ಹೇಳ್ತಾರೆ ಅವರು ಏನು ಹೇಳಿದ್ರು ನಾವು ಉಲ್ಟಾ ಅರ್ಥ ಮಾಡಿಕೊಳ್ಳಬೇಕು.
ಅದಾನಿ ಅಂಬಾನಿ ಆಸ್ತಿ ದುಪ್ಪಟ್ಟು ಆಗಿದೆ. ಗಾಂಧಿ ಕೊಂದವನನ್ನ ದೇಶಭಕ್ತ ಎಂದು ಕರೆಯುತ್ತಾರೆ ಇವರಿಗೆ ನಾಚಿಕೆ ಆಗಬೇಕು.

ಎಮರ್ಜೆನ್ಸಿ ಘೋಷಣೆ ಮಾಡಿಲ್ಲ, ಆದ್ರೆ ಜಾರಿಯಲ್ಲಿದೆ.ದೇಶದಲ್ಲಿ ಪ್ರಜಾಪ್ರಭುತ್ವ ನಾಶ ಆಗ್ತಿದೆ. ಸಂವಿಧಾನಕ್ಕೆ ಗೌರವ ಇಲ್ಲದಂತೆ ಆಗಿದೆ.ಹತ್ತು ತಿಂಗಳಿಂದ ರೈತರು ಹೋರಾಟ ಮಾಡ್ತಿದ್ದಾರೆ.ಮೋದಿ ದೇಶದಲ್ಲಿ ಏನು ಆಗಿಲ್ಲ ಅನ್ನೋ ರೀತಿ ನಡೆದುಕೊಳ್ಳುತ್ತಿದ್ದಾರೆ. ರೈತರ ಹೋರಾಟ ಕಾಂಗ್ರೆಸ್ ಪ್ರೇರಿತ ಪ್ರತಿಭಟನೆ ಎಂದು ಸಿಎಂ ಕರೆದಿದ್ದಾರೆ. ಇವರಿಗೆ ಏನೆಂದು ಹೇಳಬೇಕು. ಮೋದಿ ಉಳಿಯಲು ಬಿಟ್ರೆ ನಮಗೆ ಬಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣ ಆಗುತ್ತೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!