ಬೆಂಗಳೂರು: ಸೌಜನ್ಯ ಕೇಸ್ ಹೋರಾಟಗಾರ ಮಹೇಶ್ ತಿಮರೋಡಿಗೆ ಈಗ ಕೊಂಚ ರಿಲ್ಯಾಕ್ಸ್ ಆದಂತೆ ಆಗಿದೆ. ಬೆಳ್ತಂಗಡಿಯಿಂದ ರಾಯಚೂರಿಗೆ ಗಡಿಪಾರು ಮಾಡಿ, ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಹೈಕೋರ್ಟ್ ಗಡಿಪಾರಿಗೆ ಮತ್ತೆ ತಡೆ ನೀಡಿದ್ದು, ಮಹೇಶ್ ತಿಮರೋಡಿಗೆ ಸಮಾಧಾನವಾದಂತಾಗಿದೆ.
ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾವರ್ಗೀಸ್ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ, ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಪೂರ್ಣಗೊಳಿಸಿದ್ದು, ಆದೇಶ ಕಾಯ್ದಿರಿಸಿದೆ. ಆದರೆ ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಬೇಡ. ಗಡಿಪಾರು ಜಾರಿಗೊಳಿಸದಂತೆ ಮಹತ್ವ್ ಸೂಚನೆ ನೀಡಿದೆ. ಇದರೊಂದಿಗೆ ಮಹೇಶ್ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕವಾಗಿ ಗಡಿಪಾರಿನಿಂದ ಪಾರಾದಂತೆ ಆಗಿದೆ.
ಈ ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ಕೇಸ್ ಗಳು ದಾಖಲಾಗಿದ್ದವು. ಅದರಲ್ಲೂ ವಿವಿಧವಾದಂತ ಕೇಸ್ ಗಳು ಅದಾಗಿದ್ದವು. ಹೀಗಾಗಿ ಮಹೇಶ್ ಶೆಟ್ಟಿತಿಮರೋಡಿಯನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷಗಳ ಕಾಲ ಅವರನ್ನು ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿತ್ತು. ಸೆಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತರಾದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಆದ್ರೆ ಇನ್ನೂ ಕೂಡ ಗಡಿಪಾರು ಪ್ರಕ್ರಿಯೆ ನಡೆದಿಲ್ಲ. ಯಾಕಂದ್ರೆ ಗಡಿಪಾರು ನೋಟೀಸ್ ಅನ್ನು ಪೊಲೀಸರು ಖುದ್ದು ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನೀಡಬೇಕಿದೆ. ಆದರೆ ಆ ನೋಟೀಸ್ ಅನ್ನು ತಿಮರೋಡಿಗೆ ಕೊಡುವುದಕ್ಕೆ ಆಗಿರಲಿಲ್ಲ. ಅವರ ಮನೆಗೆ ಅಂಟಿಸಿ ಬಂದಿದ್ದರು. ಈಗ ತಿಮರೋಡಿ ಅವರು ಕಾನೂನು ಮೂಲಕವೇ ಗೆದ್ದಿದ್ದಾರೆ. ಗಡಿಪಾರಿನಿಂದ ಬಚಾವ್ ಆಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















