Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕರ ಸಂಕ್ರಾಂತಿ : ವಿಜೃಂಭಣೆಯಿಂದ ಜರುಗಿದ ಮಾಸ್ತಮ್ಮದೇವಿಯ ಮೆರವಣಿಗೆ : ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.15 : ಹನ್ನೊಂದನೆ ವರ್ಷದ ಮಕರ ಸಂಕ್ರಾಂತಿ ಮಹೋತ್ಸವದ ಅಂಗವಾಗಿ ಮಾಸ್ತಮ್ಮದೇವಿಯ ಮೆರವಣಿಗೆ ವಿಜೃಂಭಣೆಯಿಂದ ಸಾಗಿತು.

ಉಚ್ಚಂಗಿಯಲ್ಲಮ್ಮ ದೇವಸ್ಥಾನದಿಂದ ಹೊರಟ ಮಾಸ್ತಮ್ಮದೇವಿ ಮೆರವಣಿಗೆ ಸಣ್ಣಗರಡಿ ಸಮೀಪವಿರುವ ದೇವಸ್ಥಾನಕ್ಕೆ ತಲುಪಿತು.

ಪೂರ್ಣಕುಂಭ ಹೊತ್ತ ನೂರಾರು ಮಹಿಳೆಯರು ಮೆರವಣಿಗೆಯಲ್ಲಿ ಸಾಗಿದರು.
ಡೊಳ್ಳು ತಮಟೆ ಮೆರವಣಿಗೆಯಲ್ಲಿತ್ತು.
ನಗರಸಭೆ ಸದಸ್ಯರುಗಳಾದ ಆರ್.ನಾಗಮ್ಮ, ಭಾಸ್ಕರ್, ಗುತ್ತಿಗೆದಾರ ಕುಮಾರಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಮಾಜಿ ಸದಸ್ಯ ಮಹೇಶ್ ಹಾಗೂ ದೇವಸ್ಥಾನದ ಭಕ್ತ ಮಂಡಳಿಯವರು ಮೆರವಣಿಗೆಯಲ್ಲಿದ್ದರು.


ಏಕನಾಥೇಶ್ವರಿ ಅಮ್ಮನವರು

ಐತಿಹಾಸಿಕ ಚಿತ್ರದುರ್ಗದ ಬೆಟ್ಟದಲ್ಲಿರುವ ಏಕನಾಥೇಶ್ವರಿ ಅಮ್ಮನನ್ನು ಮಕರ ಸಂಕ್ರಾಂತಿಯಂದು ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.

ಬೃಹಧಾಕಾರವಾದ ಸುಗಂಧರಾಜ ಹಾರ, ಗುಲಾಬಿ, ಕನಕಾಂಬರ, ಸೇವಂತಿಗೆ, ಹಸಿರುಪತ್ರೆ, ಕಣಗಲ ಹೂವಿನಿಂದ ಸಿಂಗರಿಸಿ ಪೂಜಿಸಲಾಯಿತು.
ನೂರಾರು ಭಕ್ತರು ಬೆಟ್ಟವೇರಿ ಏಕನಾಥೇಶ್ವರಿ ಅಮ್ಮನ ದರ್ಶನ ಪಡೆದರು. ಅಲ್ಲಲ್ಲಿ ದೇವಸ್ಥಾನಗಳಲ್ಲಿ ಸಿಹಿ ಪೊಂಗಲ್, ಪುಳಿಯೋಗರೆ, ಎಳ್ಳು-ಬೆಲ್ಲವನ್ನು ಭಕ್ತರಿಗೆ ವಿತರಿಸಲಾಯಿತು.


ಉಚ್ಚಂಗಿಯಲ್ಲಮ್ಮ ದೇವಿ

ನಗರದ ಕೋಟೆ ರಸ್ತೆಯಲ್ಲಿರುವ ಉಚ್ಚಂಗಿಯಲ್ಲಮ್ಮನನ್ನು ಬಗೆ ಬಗೆಯ ಹೂವು ಹಾರ, ಹಸಿರುಪತ್ರೆ ಹಾಗೂ ನಾನಾ ರೀತಿಯ ಹಣ್ಣುಗಳಿಂದ ಕಣ್ಣು ಕೋರೈಸುವಂತೆ ಅಲಂಕರಿಸಲಾಗಿತ್ತು.
ಕಿತ್ತಳೆ, ದ್ರಾಕ್ಷಿ, ಸೇಬು, ಅನಾನಸ್ ಹಣ್ಣುಗಳಿಂದ ಉಚ್ಚಂಗಿಯಲ್ಲಮ್ಮನಿಗೆ ಸಿಂಗರಿಸಲಾಗಿತ್ತು. ಬೆಳಗಿನಿಂದ ಸಂಜೆಯತನಕ ಸಹಸ್ರಾರು ಭಕ್ತರು ಉಚ್ಚಂಗಿಯಲ್ಲಮ್ಮನ ದರ್ಶನ ಪಡೆದು ಶ್ರದ್ದಾಭಕ್ತಿಯನ್ನು ಸಮರ್ಪಿಸಿದರು.


ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ

ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೋಗಿಮಟ್ಟಿ ರಸ್ತೆಯಲ್ಲಿರುವ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮನಿಗೆ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು.
ಅಭಿಷೇಕ, ಹೂವಿನ ಅಲಂಕಾರ, ಮಹಾ ಮಂಗಳಾರತಿ ನಂತರ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.
ದೇವಸ್ಥಾನದ ಮುಂಭಾಗ ಕಬ್ಬಿನ ಜಲ್ಲೆ ಹಾಗೂ ಬಾಳೆದಿಂಡಿನಿಂದ ಸಿಂಗರಿಸಲಾಗಿತ್ತು. ಬಣ್ಣ ಬಣ್ಣ ಹೂವು ಹಾರ, ದ್ರಾಕ್ಷಿ, ಅನಾನಸ್, ಕಿತ್ತಲೆ ಹಣ್ಣುಗಳಿಂದ ದೇವಸ್ಥಾನದ ಒಳಗಡೆ ಅಲಂಕರಿಸಲಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...