ಚಿತ್ರದುರ್ಗದಲ್ಲಿ ರಾಜಾ ವೀರ ಮದಕರಿ ನಾಯಕರ ಥೀಮ್ ಪಾರ್ಕ್ ಮಾಡಿ : ಶ್ರೀ ವಾಲ್ಮಿಕಿ ಪ್ರಸನ್ನಾನಂದ ಸ್ವಾಮೀಜಿ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮಾ.24 : ದುರ್ಗದ ಜನರ ಹಾಗೂ ಸಮುದಾಯದ ಒತ್ತಾಸೆಯಂತೆ ಚಿತ್ರದುರ್ಗದಲ್ಲಿ ಸರ್ಕಾರದವತಿಯಿಂದ ರಾಜಾ ವೀರ ಮದಕರಿ ನಾಯಕರ ಥೀಮ್ ಪಾರ್ಕ್ ಮಾಡಬೇಕು ಎಂದು ಮಹರ್ಷಿ ವಾಲ್ಮಿಕಿ ಗುರುಪೀಠದ ಶ್ರೀ ವಾಲ್ಮಿಕಿ ಪ್ರಸನ್ನಾನಂದ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಗೆ ಪ್ರವಾಸಿ ಮಂದಿರದಲ್ಲಿ ಸೋಮವಾರ ಈ ಕುರಿತು ಮನವಿ ಸಲ್ಲಿಸಿರುವ ಸ್ವಾಮೀಜಿ, ರಾಜಾ ವೀರ ಮದಕರಿ ನಾಯಕರ ಥೀಮ್ ಪಾರ್ಕ ಮಾಡುತ್ತೇವೆಂದು ಕೆಂದ್ರ ಸರ್ಕಾರ ಘೋಷಣೆ ಮಾಡಿತ್ತು ಆದರೆ ಇದುವರೆಗೂ ಅದು ಈಡೇರಿಲ್ಲ ಆದ್ದರಿಂದ ತಮ್ಮ ಸರ್ಕಾರದ ಅವಧಿಯಲ್ಲಿ ಥೀಮ್ ಪಾರ್ಕ ಮಾಡಬೇಕು. ಚಿತ್ರದುರ್ಗವನ್ನು ಆಳಿದ ರಾಜಾ ಮತ್ತಿ ತಿಮ್ಮಣ್ಣನಾಯಕರಿಂದ ಕೊನೆ ರಾಜಾವೀರ ಮದಕರಿನಾಯಕರವರೆಗೆ ಈ ನಾಡಿಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ ಇವರ ಕಾಲದಲ್ಲಿ ಈ ನಾಡು ಸುವರ್ಣಯುಗವಾಗಿದೆ ಎಂದು ಅನೇಕ ಇತಿಹಾಸಗಾರರು ತಿಳಿಸಿದ್ದಾರೆ ಹಾಗಾಗಿ ಈ ನಾಡಿಗೆ ತನ್ನದೇ ಆದ ಸಂಸ್ಕೃತಿ ಗೌರವವಿದೆ. ಅದನ್ನು ಉಳಿಸಲು ಮುಂದಿನ ಪೀಳಿಗೆಗೆ ಪರಿಚಹಿಸಲು ಸರ್ಕಾರದ ವತಿಯಿಂದ ದುರ್ಗೋತ್ತೋವ ಕಾರ್ಯಕ್ರಮ ಆಚರಿಸಬೇಕು. ಜಿಲ್ಲೆಯಲ್ಲಿ ಅತಿ ಹೆಚ್ಚು ಬುಡಕಟ್ಟು ಸಮುದಾಯವನ್ನು ಹೊಂದಿದ್ದು ಚಿತ್ರದುರ್ಗದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿಯನ್ನು ಕೂಡ ಸಲ್ಲಿಸಲಾಗಿದೆ ಆದ್ದರಿಂದ ತಾವು ಸರ್ಕಾರದ ಗಮನಕ್ಕೆ ತಂದು ಬುಡಕಟ್ಟು ವಿಶ್ವ ವಿದ್ಯಾಲಯ ಸ್ಥಾಪಿಸಬೇಕೆಂದು ಸಮುದಾಯದ ಒತ್ತಾಸೆಯಾಗಿದೆ ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರುಗಳಾದ ಎಂ.ಚಂದ್ರಪ್ಪ, ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಕೆ.ಸಿ.ವಿರೇಂದ್ರ ಪಪ್ಪಿ, ಜಿಲ್ಲಾ ನಾಯಕ ಸಂಘದ ಅಧ್ಯಕ್ಷರಾದ ಹೆಚ್.ಜೆ.ಕೃಷ್ಣಮೂರ್ತಿ, ನಗರಸಭಾ ಸದಸ್ಯರಾದ ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

suddionenews

Recent Posts

ಯುರಿನ್ ಇನ್ಫೆಕ್ಷನ್ ಆಗಿದ್ಯಾ..? ಈ ಮನೆ ಮದ್ದನ್ನ ಟ್ರೈ ಮಾಡಿ

ಸಾಮಾನ್ಯವಾಗಿ ಸಾಕಷ್ಟು ಜನರಿಗೆ ಯುರಿನ್ ಇನ್ಫೆಕ್ಷನ್ ಸಮಸ್ಯೆ ಕಾಡುತ್ತದೆ. ಪಬ್ಲಿಕ್ ಟಾಯ್ಲೆಟ್ ಬಳಸಿದಾಗ ಅಥವಾ ಸ್ವಚ್ಚತೆ ಇಲ್ಲದ ವಾಶ್ ರೂಮ್…

29 minutes ago

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ, ಗುರುವಾರದ ರಾಶಿ ಭವಿಷ್ಯ 27 ಮಾರ್ಚ್ 2025…

2 hours ago

ನಾಳೆಯಿಂದ ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೊಳಲ್ಕೆರೆ ಸಜ್ಜು

ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 26 : ಗಣಪತಿಯ ಧಾರ್ಮಿಕ ಸ್ಥಳವಾದ ಹೊಳಲ್ಕೆರೆಯಲ್ಲಿ ನಾಳೆಯಿಂದ ( ಗುರುವಾರ) ಎರಡು ದಿನಗಳ ಕಾಲ…

10 hours ago

ನಾಳೆ ಮಾನವ ಹಕ್ಕು ಆಯೋಗದ ಅಧ್ಯಕ್ಷರ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ವಿಚಾರಣೆ

    ಚಿತ್ರದುರ್ಗ. ಮಾರ್ಚ್26 :  ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ…

10 hours ago

ನಾಗರಾಜ್ ಅವರಿಗೆ ಸಮಾಜ ಸೇವಾ ರತ್ನ ಮತ್ತು ಬಡವರ ಆಶಾಕಿರಣ ಪ್ರಶಸ್ತಿ ಪ್ರದಾನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

10 hours ago

6 ವರ್ಷಗಳ ಕಾಲ ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ..!

  ಸುದ್ದಿಒನ್, ಬೆಂಗಳೂರು, ಮಾರ್ಚ್. 26 :  ಬಿಜೆಪಿಯ ಶಿಸ್ತು ಸಮಿತಿ ಸಾಕಷ್ಟು ಬಾರೀ ಎಚ್ಚರಿಕೆಯನ್ನು ನೀಡಿದರು ಸಹ ಎಚ್ಚೆತ್ತುಕೊಳ್ಳದೆ…

13 hours ago