Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳಿಗೆ ದೇವಸ್ಥಾನದ ಘಂಟೆಗಿಂತ ಶಾಲೆಯ ಘಂಟೆ ಹೆಚ್ಚು ಕೇಳುವಂತೆ ಮಾಡಿ: ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ

---Advertisement---

ವರದಿ ಮತ್ತು ಫೋಟೋ ಕೃಪೆ, ರಂಗಸ್ವಾಮಿ,ಗುಬ್ಬಿ 99019 53364

ಸುದ್ದಿಒನ್, ಗುಬ್ಬಿ, ಜನವರಿ. 31 :ಮಕ್ಕಳಿಗೆ ದೇವಸ್ಥಾನದ ಘಂಟೆಗಿಂತ ಶಾಲೆಯ ಘಂಟೆ ಹೆಚ್ಚು ಕೇಳುವಂತೆ ಮಾಡಬೇಕು ಎಂದು ಆದಿ ಜಾಂಬವ ಹಿರಿಯೂರು ಶಾಖ ಮಠದ ಷಡಕ್ಷರಿ ಮನಿ ಮಹಾ ಸ್ವಾಮೀಜಿ ತಿಳಿಸಿದರು.

ತಾಲೂಕಿನ ಚೇಳೂರಿನಲ್ಲಿ ಈರಮಾಸ್ತಮ್ಮ ದೇವಿ ಕಳಶ ಸ್ಥಾಪನೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವಹಿಸಿ ಮಾತನಾಡಿ, ಸಮಾಜದ ಮುಖ್ಯ ವಾಹಿನಿಗೆ ಬಾರದ ಸಮುದಾಯಗಳು ಆಧ್ಯಾತ್ಮವನ್ನು ಹೆಚ್ಚು ನಂಬುತ್ತೇವೆ. ನಂಬಿಕೆ ಇರಬೇಕೆ ಹೊರತು ಮೂಢನಂಬಿಕೆ ಇರಬಾರದು. ಮಕ್ಕಳಿಗೆ ವಿದ್ಯಾಭ್ಯಾಸ ನೀಡಿ ಶಿಕ್ಷಣವಂತರನ್ನಾಗಿ ಮಾಡಬೇಕು. ಶಿಕ್ಷಣ ಎಲ್ಲಿ ಇರುತ್ತದೆಯೋ ಅಲ್ಲಿ ಮೋಸಕ್ಕೆ ಅವಕಾಶವಿರುವುದಿಲ್ಲ ಎಂದು ತಿಳಿಸಿದರು. ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ನೀಡುವವರೆಗೂ ನಿರಂತರ ಹೋರಾಟ ಮಾಡುತ್ತೇವೆ. ಸರ್ಕಾರ ಕಿವಿಗೊಡದಿದ್ದರೆ ಮುಂದಿನ ದಿನಗಳಲ್ಲಿ ಸಮುದಾಯದ ಪರವಾಗಿ ಉಗ್ರ ಹೋರಾಟ ಮಾಡುತ್ತೇವೆ ಎಂದರು.

ಕೆ ಎಸ್ ಆರ್ ಟಿ ಸಿ ನಿಗಮ ಮಂಡಳಿ ಅಧ್ಯಕ್ಷ ಶಾಸಕ ಎಸ್ ಆರ್ ಶ್ರೀನಿವಾಸ್ ಮಾತನಾಡಿ ಹಿರಿಯರನ್ನು ಗೌರವಿಸಿ ತಂದೆ ತಾಯಂದಿರನ್ನು ಚೆನ್ನಾಗಿ ನೋಡಿಕೊಳ್ಳುವವರು ಸಮಾಜಕ್ಕೆ ಮಾದರಿಯಾಗಿರುತ್ತಾರೆ.ಪ್ರತಿಯೊಬ್ಬರೂ ಸಹ ವಿದ್ಯಾವಂತರಾಗಿ ಸರಿಯಾದ ನಡೆ ನುಡಿ ಆಚಾರ ವಿಚಾರಗಳಿಂದ ಬದುಕಬೇಕು ಎಂದ ಅವರು ದೇವಸ್ಥಾನಕ್ಕೆ ಜಾಗ ನೀಡಿದ ಸುಜಾತ ಲೇಟ್ ನಟರಾಜು ಕುಟುಂಬವನ್ನು ಸ್ಮರಿಸಿದರು.

ಪಟೇಲ್ ಹಿತೇಶ್ ಮಾತನಾಡಿ ಚೇಳೂರು ದೇವತೆಗಳ ನಾಡು ಪಟ್ಟಣದಲ್ಲಿರುವ 101 ದೇವರುಗಳಲ್ಲಿ ಈರ ಮಾಸ್ತಮ್ಮ ದೇವಿಯು ಒಂದಾಗಿದೆ, ಸಮುದಾಯ ದಾನಿಗಳ ಸಹಕಾರದೊಂದಿಗೆ ಉತ್ತಮ ದೇವಾಲಯ ನಿರ್ಮಾಣವಾಗಿದೆ ಸರ್ವರು ಶಾಂತಿಯಿಂದ ಬಾಳಿ ಬದುಕಬೇಕಾಗಿದೆ. ಒಗ್ಗಟ್ಟಿನಿಂದ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಚೇಳೂರು ಬೆಳೆಯುತ್ತಿದೆ ಇದಕ್ಕೆ ಎಲ್ಲರ ಸಹಮತವೇ ಕಾರಣವೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾ ಪಂ ಅಧ್ಯಕ್ಷ ಸಿಎಂ ನಾಗರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ಸಿದ್ದರಾಜು, ವಿಜಯಕುಮಾರ್, ಚೇಳೂರು ಶಿವನಂಜಪ್ಪ, ಬಸವರಾಜು, ಮೋಹನ್ ಕುಮಾರ್, ಲಿಂಗರಾಜು, ಅಮಾನಿಕೆರೆ ಬಸವರಾಜು, ಲಕ್ಕೆನಹಳ್ಳಿ ನರಸಿಯಪ್ಪ, ಪಟೇಲ್ ಬಸವರಾಜು, ತಿಮ್ಮಯ್ಯ, ಕಲಾವಿದ ನರಸಿಂಹಮೂರ್ತಿ, ನಲ್ಲೂರ್ ಶಿವಣ್ಣ, ಪ್ರಾಂಶುಪಾಲ ದೇವರಾಜು , ತಿಮ್ಮಯ್ಯ, ರಂಗಸ್ವಾಮಯ್ಯ, ವೆಂಕಟೇಶ್, ಮಾದೇವಯ್ಯ, ಭಕ್ತಾದಿಗಳು ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment